ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭ – ವಿಸ್ಮಯ ಕಣ್ತುಂಬಿಕೊಳ್ಳಲು ಆಗಮಿಸುತ್ತಿರುವ ಸಾವಿರಾರು ಭಕ್ತರು

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭ – ವಿಸ್ಮಯ ಕಣ್ತುಂಬಿಕೊಳ್ಳಲು ಆಗಮಿಸುತ್ತಿರುವ ಸಾವಿರಾರು ಭಕ್ತರು

ನ್ಯೂಸ್ ಆ್ಯರೋ: ದಕ್ಷಿಣ ಭಾರತದ ಪವಿತ್ರ ಕ್ಷೇತ್ರವಾಗಿರುವ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆಗೆ ಶುರುವಾಗಿದೆ.

ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.

ವಿಸ್ಮಯಕಾರಿ ಕುಂಡಿಕೆ: ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳುತ್ತಾರೆ. ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ತೀರ್ಥವನ್ನು ಕೊಂಡೊಯ್ಯುತ್ತಾರೆ.

ತಲಕಾವೇರಿಗೆ ವಾಹನ ಪ್ರವೇಶ ನಿಷೇಧ, ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ: ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *