ಶನಿವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತೆ ಗೊತ್ತಾ? – ಈ ದಿನ ಹುಟ್ಟಿದವರಿಗೆ ತೊಂದರೆ ಜಾಸ್ತಿ, ಆದ್ರೆ ಗೆಲುವು ನಿಶ್ಚಿತ..!

ಶನಿವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತೆ ಗೊತ್ತಾ? – ಈ ದಿನ ಹುಟ್ಟಿದವರಿಗೆ ತೊಂದರೆ ಜಾಸ್ತಿ, ಆದ್ರೆ ಗೆಲುವು ನಿಶ್ಚಿತ..!

ನ್ಯೂಸ್ ಆ್ಯರೋ : ಜೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಜನಿಸಿದ ದಿನಕ್ಕೆ ಅನುಗುಣವಾಗಿ ವ್ಯಕ್ತಿಯ ವ್ಯಕ್ತಿತ್ವ ರೂಪಗೊಳ್ಳುತ್ತದೆ. ಇಂದಿನ ಈ ಲೇಖನದಲ್ಲಿ ನಾವು ನಿಮಗೆ ಶನಿವಾರ ಜನಿಸಿದ ವ್ಯಕ್ತಿಗಳ ಕುರಿತು ಮಾಹಿತಿ ನೀಡಲಿದ್ದೇವೆ. ಶನಿವಾರ ಜನಿಸಿದ ವ್ಯಕ್ತಿಗಳ ಮೇಲೆ ಶನಿ ದೇವನ ವಿಶೇಷ ಪ್ರಭಾವ ಇರುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಶನಿವಾರ, ಶನಿದೇವನಿಗೆ ಸಮರ್ಪಿತ ದಿನವಾಗಿದೆ. ಈ ಕಾರಣದಿಂದ ಶನಿದೇವನ ಪ್ರಭಾವ ವ್ಯಕ್ತಿಗಳ ಮೇಲೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಜೀವನ ಏರಿಳಿತಗಳಿಂದ ಕೂಡಿರುತ್ತದೆ

ಜೋತಿಷ್ಯ ಶಾಸ್ತ್ರದ ನಂಬಿಕೆಗಳ ಪ್ರಕಾರ ಶನಿವಾರ ಜನಿಸಿದ ವ್ಯಕ್ತಿಗಳ ಜೀವನ ಏರಿಳಿತದಿಂದ ಕೂಡಿರುತ್ತದೆ. ಈ ವ್ಯಕ್ತಿಗಳ ಜೀವನದಲ್ಲಿ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಆದರೆ, ಕೊನೆಗೆ ಇವರು ಗೆದ್ದೇಗೆಲ್ಲುತ್ತಾರೆ.

ಇವರಿಗೆ ಕೋಪ ಹೆಚ್ಚಾಗಿರುತ್ತದೆ

ಶನಿವಾರ ಜನಿಸಿದ ಜನರು ಹೆಚ್ಚು ಕೋಪಿಷ್ಠರಾಗಿರುತ್ತಾರೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಇವರ ಕೋಪ ಮೂಗಿನ ಮೇಲಿರುತ್ತದೆ.

ಪರಿಶ್ರಮ ಜೀವಿಗಳಗಿರುತ್ತಾರೆ

ಶನಿವಾರ ಜನಿಸಿದ ಜನರು ಪರಿಶ್ರಮ ಜೀವಿಗಳಾಗಿರುತ್ತಾರೆ. ತಮ್ಮ ಪರಿಶ್ರಮದಿಂದ ಇವರು ಯಶಸ್ಸನ್ನು ಸಾಧಿಸುತ್ತಾರೆ.

ಶನಿದೇವನ ಕೃಪೆ

ಶನಿವಾರ ಜನಿಸಿದ ಜನರ ಮೇಲೆ ಶನಿದೇವನ ವಿಶೇಷ ಕೃಪೆ ಇರುತ್ತದೆ. ಇವರ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳಿರುತ್ತವೆ. ಆದರೆ, ಇವರ ಮೇಲೆ ಶನಿದೇವನ ವಿಶೇಷ ಕೃಪೆ ಇರುವುದರಿಂದ ಇವರು ಎಲ್ಲಾ ರೀತಿಯ ಸಮಸ್ಯೆಗಳಿಂದ ಪಾರಾಗುತ್ತಾರೆ.

ಎಲ್ಲಾ ಕಾರ್ಯಗಳನ್ನು ಸಂಪೂರ್ಣ ಶ್ರದ್ಧೆಯಿಂದ ನಿರ್ವಹಿಸುತ್ತಾರೆ

ಶನಿವಾರ ಜನಿಸಿದ ಜನರು ಯಾವುದೇ ಕೆಲಸ ಮಾಡಿದರು ಕೂಡ ಅದನ್ನು ಸಂಪೂರ್ಣ ಶ್ರದ್ಧೆ ಹಾಗೂ ನಿಷ್ಠೆಯಿಂದ ಪೂರ್ಣಗೊಳಿಸುತ್ತಾರೆ. ಈ ಜನರ ಕೆಲಸ ಯಾವಾಗಲು ಉತ್ತಮ ಗುಣಮಟ್ಟದ್ದಾಗಿರುತ್ತದೆ.

ಇತರರಿಗೆ ಸಹಾಯ ಮಾಡುವ ಜೀವಿಗಳು

ಶನಿವಾರ ಹುಟ್ಟಿದವರು ಪರ ಸಹಾಯ ಮೆರೆಯುವಂತರಾಗಿರುತ್ತಾರೆ. ಯಾರಿಗಾದರೂ ಕೂಡ ಸಹಾಯ ಮಾಡುವಲ್ಲಿ ಇವರು ಯಾವತ್ತು ಮುಂದು. ದಾನ-ಪುಣ್ಯ ಕಾರ್ಯಗಳನ್ನು ಮಾಡುವಲ್ಲಿ ಇವರು ಯಾವತ್ತು ಮುಂದಿರುತ್ತಾರೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *