ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ ಹಿನ್ನೆಲೆ – ಬಾಗಿಲು ತೆರೆದ ಕಲಿಯುಗವರದ ಅಯ್ಯಪ್ಪ ಸ್ವಾಮಿ ದೇಗುಲ

ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ ಹಿನ್ನೆಲೆ – ಬಾಗಿಲು ತೆರೆದ ಕಲಿಯುಗವರದ ಅಯ್ಯಪ್ಪ ಸ್ವಾಮಿ ದೇಗುಲ

ನ್ಯೂಸ್ ಆ್ಯರೋ : ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಗುರುವಾರ ತೆರೆಯಿತು.

ದೇವಾಲಯದ ಪ್ರಧಾನ ಅರ್ಚಕ ಕಂದರಾರು ಮಹೇಶ್ ಮೋಹನರಾರು ನಿರ್ಗಮಿತ ಪ್ರಧಾನ ಅರ್ಚಕ ಕೆ.ಜಯರಾಮನ್ ನಂಬೂತಿರಿ ಅವರ ಅನುಪಸ್ಥಿತಿಯಲ್ಲಿ ಗರ್ಭಗುಡಿಯನ್ನು ತೆರೆದರು.

ತೀರ್ಥಯಾತ್ರೆ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಆಗಮಿಸುವುದರಿಂದ ಸಾಲುಗಳನ್ನು ನಿಯಂತ್ರಿಸಲು ಸಿಬ್ಬಂದಿ ನೇಮಕ ಕೂಡ ಮಾಡಲಾಗಿದೆ.

ಈಗಾಗಲೇ ದೇವರ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದು ಸರತಿ ಸಾಲಿನಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ಮಲಯಾಳಂ ಕ್ಯಾಲೆಂಡರ್ ಪ್ರಕಾರ 41 ದಿನಗಳ ಕಾಲ ದೇಗುಲದಲ್ಲಿ ಮಂಡಲ ಪೂಜೆ ಹಾಗೂ ಮಕರವಿಳಕ್ಕು ಯಾತ್ರೆ ಆರಂಭವಾಗಲಿದೆ.

ಜನವರಿ 15ರ ಮಕರ ಸಂಕ್ರಮಣ ದಿನದಂದು ಮಕರವಿಳಕ್ಕು ನೆರವೇರಲಿದ್ದು, ದೇಶದಾದ್ಯಂತ ಲಕ್ಷಾಂತರು ಭಕ್ತರು ಶಬರಿಮಲೆಗೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಮೂಲ ಸೌಕರ್ಯಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ, ಆಸ್ಪತ್ರೆ, ಶೌಚಾಲಯ ಸೇರಿದಂತೆ ಭಕ್ತರಿಗೆ ತಂಗುವ, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗಿದೆ.

ಅಲ್ಲದೇ ಕೇರಳ ಸರ್ಕಾರದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಜನಸಂದಣಿಯನ್ನು ನಿರ್ವಹಿಸಲು ಆರು ಹಂತಗಳಲ್ಲಿ 13,000 ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಮತ್ತು ಇಡೀ ಯಾತ್ರಾ ವಲಯವನ್ನು ಕಟ್ಟುನಿಟ್ಟಾದ ಕಣ್ಗಾವಲು ಜಾಲದ ಅಡಿಯಲ್ಲಿ ತರಲಾಗಿದೆ.

ಮೂರು ತಾತ್ಕಾಲಿಕ ಪೊಲೀಸ್ ಠಾಣೆಗಳನ್ನು – ಸನ್ನಿಧಾನಂ, ನಿಲಕಲ್ ಮತ್ತು ವಡಸ್ಸೆರಿಕ್ಕರಾದಲ್ಲಿ ತಲಾ ಒಂದು ತೆರೆಯಲಾಗಿದೆ. ನಿಲಕಲ್ ಮತ್ತು ಸುತ್ತಮುತ್ತಲಿನ 17 ಮೈದಾನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ವರ್ಚುವಲ್ ಕ್ಯೂಗಳಿಗಾಗಿ 15 ಕೌಂಟರ್‌ಗಳನ್ನು ತೆರೆಯಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *