ತಿರುಪತಿಯಲ್ಲಿ ದೇವರ ವಿಶೇಷ ದರ್ಶನಕ್ಕೆ ₹ 300 ದರ: ಆನ್‌ಲೈನ್‌ ಕೋಟಾದ ಟಿಕೆಟ್‌ ಬಿಡುಗಡೆ ಮಾಡಿದ ಟಿಟಿಡಿ

ತಿರುಪತಿಯಲ್ಲಿ ದೇವರ ವಿಶೇಷ ದರ್ಶನಕ್ಕೆ ₹ 300 ದರ: ಆನ್‌ಲೈನ್‌ ಕೋಟಾದ ಟಿಕೆಟ್‌ ಬಿಡುಗಡೆ ಮಾಡಿದ ಟಿಟಿಡಿ

ನ್ಯೂಸ್‌ಆ್ಯರೋ: ತಿರುಪತಿಯಲ್ಲಿ ಭಕ್ತರಿಗೆ ವೆಂಕಟೇಶ್ವರ ದೇವರ ವಿಶೇಷ ಪ್ರವೇಶ ದರ್ಶನಕ್ಕಾಗಿ ಪ್ರತಿ ₹300 ದರದಲ್ಲಿ ಆನ್‌ಲೈನ್ ಕೋಟಾದ ಟಿಕೆಟ್‌ಗಳನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇಂದು ಬೆಳಿಗ್ಗೆ 10ಕ್ಕೆ ಬಿಡುಗಡೆ ಮಾಡಲಿದೆ.

ಭಕ್ತರು ಜನವರಿ ಮತ್ತು ಫೆಬ್ರವರಿ ತಿಂಗಳಿಗೆ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಜನವರಿ 12ರಿಂದ ಫೆಬ್ರುವರಿ 31 ರವರೆಗೆ ಟಿಕೆಟನ್ನು ಆನ್‌ಲೈನ್ ಕೋಟಾವನ್ನು ಬಿಡುಗಡೆ ಮಾಡಲಾಗಿದೆ. ಭಕ್ತರು ಇದನ್ನು ಗಮನಿಸಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸುವಂತೆ ವಿನಂತಿಸಲಾಗಿದೆ ಎಂದು ಟಿಟಿಡಿ ಟ್ವೀಟ್‌ನಲ್ಲಿ ತಿಳಿಸಿದೆ.

ಬಾಲಾಲಯದ ನಿಮಿತ್ತ ಫೆ.22ರಿಂದ ಫೆ.28ರವರೆಗೆ ಸರ್ವ ದರ್ಶನಕ್ಕೆ ಅವಕಾಶವಿಲ್ಲ. ಇದೇ ವೇಳೆ ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನ ನಡೆಯುತ್ತಿದೆ ಎಂದು ಹೇಳಿದೆ.

ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರತಿದಿನ 50,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಟಿಟಿಡಿ ಪ್ರಕಾರ 2022ರ ಡಿಸೆಂಬರ್ 23ರಂದು 62,055 ಯಾತ್ರಿಕರು ದೇವರ ದರ್ಶನ ಪಡೆದಿದ್ದಾರೆ.

ತಿರುಮಲ ದೇವಸ್ಥಾನದಲ್ಲಿ ಡಿಸೆಂಬರ್ 23ರಂದು ಸಂಜೆ ರಂಗನಾಯಕುಲ ಮಂಟಪದಲ್ಲಿ ವಾರ್ಷಿಕ ಅಧ್ಯಯನೋತ್ಸವಗಳು ಪ್ರಾರಂಭವಾಗಿದೆ. 25 ದಿನಗಳ ವಾರ್ಷಿಕ ಉತ್ಸವವು ವೈಕುಂಠ ಏಕಾದಶಿಗೆ 11 ದಿನಗಳ ಮೊದಲು ಪ್ರಾರಂಭವಾಗುತ್ತದೆ. ಜನವರಿ 15 ರಂದು ಮುಕ್ತಾಯಗೊಳ್ಳುತ್ತದೆ.

ಈ ಉತ್ಸವದ ವಿಶಿಷ್ಟತೆ ಏನೆಂದರೆ 12 ಆಳ್ವಾರರು ರಚಿಸಿದ 4000 ಸ್ತೋತ್ರಗಳನ್ನು ನಾಲಯೈರ ದಿವ್ಯಪ್ರಬಂಧ ಪಾಸುರಂಗಳನ್ನು ಪ್ರತಿದಿನ ಪಠಿಸಲಾಗುತ್ತದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *