ಶನಿವಾರದಂದು ಬರುವ ಅಮಾವಾಸ್ಯೆ ವಿಶೇಷವಾದ ದಿನ: ನಾಳೆ ಈ ಕೆಲ ತಪ್ಪುಗಳನ್ನು ಮಾಡಲೇ ಬೇಡಿ

ಶನಿವಾರದಂದು ಬರುವ ಅಮಾವಾಸ್ಯೆ ವಿಶೇಷವಾದ ದಿನ: ನಾಳೆ ಈ ಕೆಲ ತಪ್ಪುಗಳನ್ನು ಮಾಡಲೇ ಬೇಡಿ

ನ್ಯೂಸ್ ಆ್ಯರೋ : ಶನಿವಾರದಂದು ಅಮವಾಸ್ಯೆ ಬಂದರೆ ಅದನ್ನು ಶನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಶನಿವಾರವು ಶನಿಗೆ ಸಂಬಂಧಿಸಿದ ದಿನವಾಗಿರುವುದರಿಂದ ಶನಿ ಅಮಾವಾಸ್ಯೆಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ.

ನಾಳೆ ಅಂದರೆ ಶನಿವಾರ ಶನೈಶ್ಚರ ಅಮಾವಾಸ್ಯೆ. ಮಾಘ ಮಾಸದ ಅಮಾವಾಸ್ಯೆಯನ್ನು ಸಾಮಾನ್ಯವಾಗಿ ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ವರ್ಷ ಮೌನಿ ಅಮಾವಾಸ್ಯೆಯ ದಿನದಂದು ಶನಿಯು ತನ್ನ ಮೂಲ ರಾಶಿಯಾದ ಕುಂಭ ರಾಶಿಯಲ್ಲಿ ಇರುವುದರಿಂದ ಇದು ಇನ್ನಷ್ಟು ವಿಶೇಷವಾಗಿದೆ. ಇನ್ನೂ ಈ ದಿನದಲ್ಲಿ ಕೆಲ ಆಚಾರಗಳನ್ನು ಪಾಲಿಸುವುದು ಅಗತ್ಯವಾಗಿದ್ದು, ಕೆಲ ಕೆಲಸಗಳನ್ನು ಮಾಡಿದರೆ ಶನಿಯ ಕೋಪಕ್ಕೆ ತುತ್ತಾಗಬೇಕಾಗುತ್ತದೆ ಎಂಬುದು ನಂಬಿಕೆ. 

ಈ ದಿನ ಏನೆಲ್ಲ ಮಾಡಬಾರದು:

ಮಾಂಸಾಹಾರ-ಮದ್ಯವನ್ನು ಸೇವಿಸಬಾರದು. ಹೀಗೆ ಮಾಡುವುದರಿಂದ ಶನಿದೇವನಿಗೆ ಕೋಪ ಬರುತ್ತದೆ. ಶನೈಶ್ಚರ ಅಮಾವಾಸ್ಯೆಯ ದಿನದಂದು ಸಾತ್ವಿಕ ಆಹಾರ ಸೇವಿಸಬೇಕು.

ಈ ದಿನದಂದು ಅಸಹಾಯಕರು, ಬಡವರು, ಅಂಗವಿಕಲರನ್ನು ಎಂದಿಗೂ ಹಿಂಸಿಸಬಾರದು ಅಥವಾ ಶ್ರಮಜೀವಿಗಳನ್ನು ಶೋಷಣೆ ಮಾಡಬಾರದು.

ಯಾವುದೇ ಕಾರಣಕ್ಕೂ ಈ ದಿನದಂದು ಹೊಸ ಚಪ್ಪಲಿ, ಶೂಗಳನ್ನು ಖರೀದಿಸಬಾರದು. ಒಂದು ವೇಳೆ ಈ ದಿನ ಪಾದರಕ್ಷೆಗಳನ್ನು ಖರೀದಿಸಿದಲ್ಲಿ ಭಾರೀ ನಷ್ಟ ಸಂಭವಿಸುವ ಸಾಧ್ಯತೆಯಿದೆ. ಹೀಗೆ ಮಾಡುವುದರಿಂದ ಜಾತಕದಲ್ಲಿ ಶನಿದೋಷ ಸೃಷ್ಟಿಯಾಗುತ್ತದೆ. 

ಎಣ್ಣೆ, ಕಬ್ಬಿಣವನ್ನು ಕೂಡಾ ಖರೀದಿಸಬಾರದು. ಯಾಕೆಂದರೆ ಮನೆಯಲ್ಲಿ ಬಡತನ ತಾಂಡವವಾಡುತ್ತದೆ. ಶನೈಶ್ಚರ ಅಮಾವಾಸ್ಯೆಯ ದಿನ ಶನಿಗೆ ಸಂಬಂಧಿಸಿದ ಯಾವ ವಸ್ತುಗಳನ್ನು ಕೂಡಾ ಮನೆಗೆ ತರಬೇಡಿ.

ಅದಲ್ಲದೆ ಪುರುಷ ಮತ್ತು ಮಹಿಳೆ ದೈಹಿಕ ಸಂಬಂಧ ಬೆಳೆಸಬಾರದು. ಗರುಡ ಪುರಾಣದ ಪ್ರಕಾರ, ಅಮವಾಸ್ಯೆಯ ದಿನದಂದು ಜನಿಸಿದ ಮಗು ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *