ವೈಕುಂಠ ದರ್ಶನಕ್ಕೆ ಆನ್‌ಲೈನ್‌ ಟಿಕೆಟ್ ಖರೀದಿಸಲು ಭಕ್ತರ ಪೈಪೋಟಿ – ಬಿಡುಗಡೆಯಾದ 21 ನಿಮಿಷಗಳಲ್ಲಿ ಟಿಕೆಟ್ ಖಾಲಿ

ವೈಕುಂಠ ದರ್ಶನಕ್ಕೆ ಆನ್‌ಲೈನ್‌ ಟಿಕೆಟ್ ಖರೀದಿಸಲು ಭಕ್ತರ ಪೈಪೋಟಿ – ಬಿಡುಗಡೆಯಾದ 21 ನಿಮಿಷಗಳಲ್ಲಿ ಟಿಕೆಟ್ ಖಾಲಿ

ನ್ಯೂಸ್ ಆ್ಯರೋ : ತಿರುಮಲ ಶ್ರೀವಾರಿ ವೈಕುಂಠದ ದರ್ಶನಕ್ಕೆ ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಲು ಭಕ್ತರು ಪೈಪೋಟಿ ನಡೆಸಿದ್ದು ಕಂಡುಬಂದಿದೆ. ಆನ್‌ಲೈನ್‌ನಲ್ಲಿ ಟಿಟಿಡಿ ನೀಡಿದ 300 ರೂಪಾಯಿಯ ಎಸ್‌ಇಡಿ ಟಿಕೆಟ್‌ಗಳಿಗೆ ಭಕ್ತರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿ, ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬಿಡುಗಡೆ ಮಾಡುತ್ತಿದ್ದಂತೆ ಎಲ್ಲವೂ 21 ನಿಮಿಷಗಳಲ್ಲಿ ಖಾಲಿಯಾಗಿವೆ.

ಶುಕ್ರವಾರ ಬೆಳಗ್ಗೆ 10 ಗಂಟೆಗೆ ವೈಕುಂಠ ದರ್ಶನದ ಟಿಕೆಟ್ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯಾದ 21 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ಗಳನ್ನು ಭಕ್ತರು ಬುಕ್ ಮಾಡಿದ್ದಾರೆ. ಇವುಗಳ ಮಾರಾಟದ ಮೂಲಕ ಟಿಟಿಡಿಗೆ 6.75 ಕೋಟಿ ರೂಪಾಯಿ ಆದಾಯ ಬಂದಿದೆ.

ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ವೈಕುಂಠ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಉದ್ದೇಶಕ್ಕಾಗಿ ಟಿಟಿಡಿ ಆನ್‌ಲೈನ್‌ನಲ್ಲಿ 2.25 ಲಕ್ಷ ಎಸ್‌ಇಡಿ ಟಿಕೆಟ್‌ಗಳನ್ನು ಬಿಡುಗಡೆ ಮಾಡಿತ್ತು. ಈ ಟಿಕೆಟ್‌ಗಳ ಖರೀದಿಗೆ ಭಕ್ತರು ಹೆಚ್ಚಿನ ಆಸಕ್ತಿ ತೋರಿದ್ದಾರೆ. ಈ ಟಿಕೆಟ್‌ಗಳು ಭಕ್ತರಿಗೆ ಸಾಕಾಗಲಿಲ್ಲ. ಕೇವಲ 21 ನಿಮಿಷದಲ್ಲಿ ಈ ಟಿಕೆಟ್‌ಗಳು ಖಾಲಿಯಾಗಿದ್ದು ಇದು ತಿರುಪತಿ ತಿಮ್ಮಪ್ಪನ ಮೇಲೆ ಭಕ್ತರಿಗಿರುವ ನಂಬಿಕೆ ಎಷ್ಟಿದೆ ಎನ್ನುವುದನ್ನು ತೋರಿಸುತ್ತದೆ.

ಟಿಟಿಡಿ ಐಟಿ ಜಿಎಂ ಸಂದೀಪ್ ರೆಡ್ಡಿ ಬಗ್ಗೆ ಪ್ರತಿಕ್ರಿಯಿಸಿ, ಪ್ರಸ್ತುತ ಆನ್‌ಲೈನ್ ಟಿಕೆಟ್ ನೀಡಲು ಕ್ಲೌಡ್ ತಂತ್ರಜ್ಞಾನವನ್ನು ಬಳಸಲಾಗುತ್ತಿರುವುದರಿಂದ ಯಾವುದೇ ತೊಂದರೆಯಿಲ್ಲದೆ ಭಕ್ತರು ಬುಕ್ ಮಾಡಿದ್ದಾರೆ.

ಅದಲ್ಲದೆ ವೈಕುಂಠ ದ್ವಾರ ದರ್ಶನಕ್ಕೆ ಸಂಬಂಧಿಸಿದಂತೆ ಒಂಬತ್ತು ಪ್ರದೇಶಗಳಲ್ಲಿ ಕೌಂಟರ್‌ಗಳನ್ನು ಸ್ಥಾಪಿಸಲಾಗುವುದು ಮತ್ತು ಹಿಂದಿನ ದಿನದಿಂದ 4.25 ಲಕ್ಷ ಸರ್ವದರ್ಶನಂ ಟೈಮ್ ಸ್ಲಾಟ್ ಟೋಕನ್‌ಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *