Asia Cup Anchors : ನೇರಪ್ರಸಾರಕ್ಕೆ ಮೆರುಗು ತುಂಬಲಿದ್ದಾರೆ ಮಹಿಳಾಮಣಿಯರು – ಈ ಬಾರಿಯ ನಿರೂಪಕಿಯರು ಯಾರೆಲ್ಲ ಗೊತ್ತಾ?

Asia Cup Anchors : ನೇರಪ್ರಸಾರಕ್ಕೆ ಮೆರುಗು ತುಂಬಲಿದ್ದಾರೆ ಮಹಿಳಾಮಣಿಯರು – ಈ ಬಾರಿಯ ನಿರೂಪಕಿಯರು ಯಾರೆಲ್ಲ ಗೊತ್ತಾ?

ನ್ಯೂಸ್ ಆ್ಯರೋ‌ : ಆಗಸ್ಟ್ 30ರಿಂದ ಬಹು ನಿರೀಕ್ಷಿತ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇದೀಗ ಟಿವಿ ನಿರೂಪಕರಾಗಿ ಕಾರ್ಯನಿರ್ವಹಿಸಲಿರುವ 5 ನಿರೂಪಕರ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಬಿಡುಗಡೆ ಮಾಡಿದೆ.

ಯಾರೆಲ್ಲ ನಿರೂಪಕರು?

ವಿಶೇಷ ಎಂದರೆ ಐವರು ನಿರೂಪಕ ಪೈಕಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು. ಈ ಮೂವರು ನಿರೂಪಕಿಯರು ವಿವರ ಇಲ್ಲಿದೆ.

ಮಯಾಂತಿ ಲ್ಯಾಂಗರ್

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮತ್ತು ಐಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರ ಸೊಸೆ ಮಯಾಂತಿ ಲ್ಯಾಂಗರ್ ಕ್ರಿಕೆಟ್ ನಿರೂಪಣೆಗೆ ಇನ್ನಷ್ಟು ಮೆರಗು ತುಂಬಲಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಇವರು ಹಲವು ಸಮಯಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

ಝೈನಾಬ್ ಅಬ್ಬಾಸ್

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ನಾಸಿರ್ ಅಬ್ಬಾಸ್ ಅವರ ಪುತ್ರಿ ಝೈನಾಬ್ ಅಬ್ಬಾಸ್ ಈ ಬಾರಿಯ ಏಷ್ಯಾ ಕಪ್ ಗೆ ಹೊಸ ರಂಗು ತುಂಬಲಿದ್ದಾರೆ. ಟಿವಿ ನಿರೂಪಕಿಯಾಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅವರು 2019ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಏಕದಿನ ವಿಶ್ವಕಪ್ ನಲ್ಲಿ ಮೊದಲ ಬಾರಿ ಟಿವಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದರು.

ಜೈತಿ ಖೇರಾ

ಭಾರೀ ಸುದ್ದಿಯಾಗಿದ್ದ ಕೋಟಾ ಫ್ಯಾಕ್ಟರಿ ಸಿಸನ್-2 ಮತ್ತು ದೆಹಲಿ ಕ್ರೈಮ್ ಸೀಸನ್-1ರಲ್ಲಿ ಕಾಣಿಸಿಕೊಂಡಿದ್ದ ನಟಿ ಜೈತಿ ಖೇರಾ ಈ ಬಾರಿಯ ಏಷ್ಯಾಕಪ್ ನಲ್ಲಿ ಟಿವಿ ನಿರೂಪಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರು ಈ ಹಿಂದೆ ಐಪಿಎಲ್ ನಲ್ಲೂ ಟಿವಿ ನಿರೂಪಕಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *