Asia Cup 2023 IND vs PAK – ಪಾಕ್ ವಿರುದ್ಧ ಕೆ.ಎಲ್.ರಾಹುಲ್ ಬದಲಿಗೆ ಇನ್ನೋರ್ವ ಕನ್ನಡಿಗನಿಗೆ ಸಿಗುತ್ತಾ ಚಾನ್ಸ್?

Asia Cup 2023 IND vs PAK – ಪಾಕ್ ವಿರುದ್ಧ ಕೆ.ಎಲ್.ರಾಹುಲ್ ಬದಲಿಗೆ ಇನ್ನೋರ್ವ ಕನ್ನಡಿಗನಿಗೆ ಸಿಗುತ್ತಾ ಚಾನ್ಸ್?

ನ್ಯೂಸ್ ಆ್ಯರೋ‌ : ಏಷ್ಯಾ ಕಪ್ ಕ್ರಿಕೆಟ್ ನ ಬಹು ನಿರೀಕ್ಷಿತ ಪಂದ್ಯ ಇಂದು ಅಪರಾಹ್ನ ನಡೆಯಲಿದೆ. ಶ್ರೀಲಂಕಾದ ಪಲ್ಲೆಕೆಲೆ ಮೈದಾನದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುವ ಮೂಲಕ ಅಭಿಮಾನಿಗಳಿಗೆ ರೋಚಕ ಪಂದ್ಯ ಕಣ್ತುಂಬಿಕೊಳ್ಳುವ ಅವಕಾಶ ಲಭಿಸಿದೆ.

ಕೆ.ಎಲ್.ರಾಹುಲ್ ಗೈರು

ಐಪಿಎಲ್ ಪಂದ್ಯಕೂಟದ ವೇಳೆ ಗಾಯಗೊಂದಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಇನ್ನೂ ಚೇತರಿಸಿಕೊಳ್ಳದ ಕಾರಣ ಅವರು ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದಾರೆ. ಇದು ಕನ್ನಡಿಗರಿಗೆ ತೀವ್ರ ನಿರಾಸೆ ತಂದಿತ್ತರೂ ಮತ್ತೋರ್ವ ಕನ್ನಡಿಗ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಅವರೇ ಪ್ರಸಿದ್ಧ್ ಕೃಷ್ಣ.

ಅವಕಾಶ ಸಿಗುತ್ತಾ?

ಉತ್ತಮ ಬೌಲಿಂಗ್ ಬಳಗದೊಂದಿಗೆ ಕಣಕ್ಕೆ ಇಳಿಯಲಿರುವ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವನ್ ನಲ್ಲಿ ಪ್ರಸಿದ್ಧ್ ಕೃಷ್ಣ ಅವರಿಗೆ ಅವಕಾಶ ಸಿಗುತ್ತಾ ಎನ್ನುವ ಚರ್ಚೆ ಅರಂಭವಾಗಿದೆ.

ಪ್ರಸಿದ್ಧ್ ಕೃಷ್ಣ

ಗಾಯಗೊಂಡು 2 ವರ್ಷಗಳ ಕಾಲ ಭಾರತ ತಂಡದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬೂಮ್ರ ಈಗಾಗಲೇ ಐರ್ಲೆಂಡ್ ಟೂರ್ನಿ ಮೂಲಕ ಕಂ ಬ್ಯಾಕ್ ಮಾಡಿದ್ದಾರೆ. ಇದೀಗ ಟೀಂ ಇಂಡಿಯಾದ ನಾಲ್ವರು ಬೌಲರ್ ಗಳ ಪೈಕಿ ಅವರಿಗೆ ಅವಕಾಶ ಸಿಗುವುದು ಬಹುತೇಕ ಖಚಿತ.

ಇನ್ನು ಮೊಹಮ್ಮದ್ ಸಿರಾಜ್ ಕೂಡ ಆಡಲಿದ್ದಾರೆ. ಹೀಗಾಗಿ 3ನೇ ಬೌಲರ್ ಸ್ಥಾನಕ್ಕಾಗಿ ಇದೀಗ ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಶಮಿ ನಡುವೆ ಪೈಪೋಟಿ ಇದೆ. ಐರ್ಲೆಂಡ್ ವಿರುದ್ಧ ಮಿಂಚಿರುವ ಪ್ರಸಿದ್ಧ್ ಕೃಷ್ಣಗೆ ಕಣಕ್ಕಿಳಿಯಲು ಅವಕಾಶ ಸಿಗುತ್ತಾ ಎನ್ನುವುದು ಇನ್ನೇನು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *