Asia Cup 2023 IND vs PAK – ಪಾಕ್ ವಿರುದ್ಧ ಕೆ.ಎಲ್.ರಾಹುಲ್ ಬದಲಿಗೆ ಇನ್ನೋರ್ವ ಕನ್ನಡಿಗನಿಗೆ ಸಿಗುತ್ತಾ ಚಾನ್ಸ್?

Asia Cup 2023 IND vs PAK – ಪಾಕ್ ವಿರುದ್ಧ ಕೆ.ಎಲ್.ರಾಹುಲ್ ಬದಲಿಗೆ ಇನ್ನೋರ್ವ ಕನ್ನಡಿಗನಿಗೆ ಸಿಗುತ್ತಾ ಚಾನ್ಸ್?

ನ್ಯೂಸ್ ಆ್ಯರೋ‌ : ಏಷ್ಯಾ ಕಪ್ ಕ್ರಿಕೆಟ್ ನ ಬಹು ನಿರೀಕ್ಷಿತ ಪಂದ್ಯ ಇಂದು ಅಪರಾಹ್ನ ನಡೆಯಲಿದೆ. ಶ್ರೀಲಂಕಾದ ಪಲ್ಲೆಕೆಲೆ ಮೈದಾನದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುವ ಮೂಲಕ ಅಭಿಮಾನಿಗಳಿಗೆ ರೋಚಕ ಪಂದ್ಯ ಕಣ್ತುಂಬಿಕೊಳ್ಳುವ ಅವಕಾಶ ಲಭಿಸಿದೆ.

ಕೆ.ಎಲ್.ರಾಹುಲ್ ಗೈರು

ಐಪಿಎಲ್ ಪಂದ್ಯಕೂಟದ ವೇಳೆ ಗಾಯಗೊಂದಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಇನ್ನೂ ಚೇತರಿಸಿಕೊಳ್ಳದ ಕಾರಣ ಅವರು ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದಾರೆ. ಇದು ಕನ್ನಡಿಗರಿಗೆ ತೀವ್ರ ನಿರಾಸೆ ತಂದಿತ್ತರೂ ಮತ್ತೋರ್ವ ಕನ್ನಡಿಗ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಅವರೇ ಪ್ರಸಿದ್ಧ್ ಕೃಷ್ಣ.

ಅವಕಾಶ ಸಿಗುತ್ತಾ?

ಉತ್ತಮ ಬೌಲಿಂಗ್ ಬಳಗದೊಂದಿಗೆ ಕಣಕ್ಕೆ ಇಳಿಯಲಿರುವ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವನ್ ನಲ್ಲಿ ಪ್ರಸಿದ್ಧ್ ಕೃಷ್ಣ ಅವರಿಗೆ ಅವಕಾಶ ಸಿಗುತ್ತಾ ಎನ್ನುವ ಚರ್ಚೆ ಅರಂಭವಾಗಿದೆ.

ಪ್ರಸಿದ್ಧ್ ಕೃಷ್ಣ

ಗಾಯಗೊಂಡು 2 ವರ್ಷಗಳ ಕಾಲ ಭಾರತ ತಂಡದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬೂಮ್ರ ಈಗಾಗಲೇ ಐರ್ಲೆಂಡ್ ಟೂರ್ನಿ ಮೂಲಕ ಕಂ ಬ್ಯಾಕ್ ಮಾಡಿದ್ದಾರೆ. ಇದೀಗ ಟೀಂ ಇಂಡಿಯಾದ ನಾಲ್ವರು ಬೌಲರ್ ಗಳ ಪೈಕಿ ಅವರಿಗೆ ಅವಕಾಶ ಸಿಗುವುದು ಬಹುತೇಕ ಖಚಿತ.

ಇನ್ನು ಮೊಹಮ್ಮದ್ ಸಿರಾಜ್ ಕೂಡ ಆಡಲಿದ್ದಾರೆ. ಹೀಗಾಗಿ 3ನೇ ಬೌಲರ್ ಸ್ಥಾನಕ್ಕಾಗಿ ಇದೀಗ ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಶಮಿ ನಡುವೆ ಪೈಪೋಟಿ ಇದೆ. ಐರ್ಲೆಂಡ್ ವಿರುದ್ಧ ಮಿಂಚಿರುವ ಪ್ರಸಿದ್ಧ್ ಕೃಷ್ಣಗೆ ಕಣಕ್ಕಿಳಿಯಲು ಅವಕಾಶ ಸಿಗುತ್ತಾ ಎನ್ನುವುದು ಇನ್ನೇನು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *