ಗೋ ಮಾಂಸ ತಿಂದು ವಿವಾದಕ್ಕೆ ಕಾರಣರಾದ ಟೀಮ್ ಇಂಡಿಯಾದ ಆಟಗಾರರು – ಯಾರೆಲ್ಲ ಬೀಫ್ ತಿಂದವರು ಗೊತ್ತೆ?

ಗೋ ಮಾಂಸ ತಿಂದು ವಿವಾದಕ್ಕೆ ಕಾರಣರಾದ ಟೀಮ್ ಇಂಡಿಯಾದ ಆಟಗಾರರು – ಯಾರೆಲ್ಲ ಬೀಫ್ ತಿಂದವರು ಗೊತ್ತೆ?

ನ್ಯೂಸ್ ಆ್ಯರೋ‌ : ಕ್ರಿಕೆಟ್ ಜಗತ್ತಿನಲ್ಲಿ ಟೀಮ್ ಇಂಡಿಯಾ ಅದ್ವಿತೀಯ ಸಾಧನೆ ಮಾಡಿ ಮೆರೆಯುತ್ತಿದೆ. ಬಹುತೇಕ ಆಟಗಾರರು ತಮ್ಮ ಪ್ರತಿಭೆ ಮೂಲಕ ಗಮನ ಸೆಳೆಯುತ್ತಿದ್ದಾರೆ. ಆಟದ ಜೊತೆಗೆ ಜೀವನಶೈಲಿಯೂ ಆಗಾಗ ಚರ್ಚೆಗೆ ಗ್ರಾಸವಾಗುತ್ತದೆ. ಅಚ್ಚರಿ ಎಂದರೆ ಟೀಮ್ ಇಂಡಿಯಾದ ಮೂವರು ಹಿಂದೂ ಧರ್ಮದ ಆಟಗಾರರು ಗೋಮಾಂಸ ತಿಂದಿದ್ದಾರೆ ಎನ್ನುವ ಸಂಗತಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಲವರು ಇದಕ್ಕೆ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಹಾಗಾದರೆ ಯಾರು ಆ ಮೂವರು ಆಟಗಾರರು ಎನ್ನುವುದರ ಮಾಹಿತಿ ಇಲ್ಲಿದೆ.

ರೋಹಿತ್ ಶರ್ಮಾ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ರೋಹಿತ್ ಶರ್ಮಾ. ತಮ್ಮ ಆಟದ ಶೈಲಿ, ನಾಯಕತ್ವದಿಂದ ಗಮನ ಸೆಳೆಯುವ ಅವರು 2021ರಲ್ಲಿ ಗೋಮಾಂಸ ತಿಂದಿದ್ದಾರೆ ಎನ್ನುವ ವಿಚಾರವೇ ತೀವ್ರ ಚರ್ಚೆ ಹುಟ್ಟು ಹಾಕಿತ್ತು. ಆದರೆ ಈ ಬಗ್ಗೆ ಹಿಟ್ ಮ್ಯಾನ್ ಯಾವುದೇ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಿಲ್ಲ.

ನವದೀಪ್ ಸೈನಿ

ವೇಗದ ಬೌಲರ್ ನವದೀಪ್ ಸೈನಿ ಕೂಡ ಇದೇ ಕಾರಣಕ್ಕೆ ನೆಟ್ಟಿಗರಿಂದ ಟ್ರೋಲಿಗೆ ಗುರಿಯಾಗಿದ್ದಾರೆ. ಅವರು ಕೂಡ ಗೋ ಮಾಂಸ ಸೇವಿಸಿದ್ದರು ಎನ್ನುವ ವಿಚಾರ ಬಹಿರಂಗವಾಗಿದ್ದು, ನೆಟ್ಟಿಗರು ಗರಂ ಆಗಿದ್ದರು. ರೋಹಿತ್ ಶರ್ಮಾ ಜೊತೆಗೆ ಅಂದು ಸೈನಿ ಇದ್ದರು ಎನ್ನಲಾಗಿದೆ.

ಪೃಥ್ವಿ ಶಾ

ಭಾರತ ಕ್ರಿಕೆಟ್ ತಂಡದ ಭರವಸೆಯ ಆಟಗಾರನೀತ. 2021ರಲ್ಲಿ ರೋಹಿತ್ ಶರ್ಮಾ, ನವದೀಪ್ ಸೈನಿ ಜೊತೆಗೆ ಪೃಥ್ವಿ ಶಾ ಕೂಡ ಬೀಫ್ ತಿಂದಿದ್ದರು ಎನ್ನುವ ಸುದ್ದಿ ಸಿಕ್ಕಾಪಟ್ಟೆ ಚರ್ಚೆಗೆ ಕಾರಣವಾಗಿದೆ.

ಗೊತ್ತಾಗಿದ್ದು ಹೇಗೆ?

ಈ ಮೂವರು ಆಟಗಾರರು ಆಹಾರ ಸೇವಿಸಿದ ಹೋಟೆಲ್ ಬಿಲ್ ಬಹಿರಂಗವಾಗುವುದರೊಂದಿಗೆ ಈ ವಿಷಯ ಹೊರ ಜಗತ್ತಿಗೆ ತಿಳಿಯಿತು. ಬಿಲ್ ನಲ್ಲಿ ಬೀಫ್ ಎಂದು ಉಲ್ಲೇಖವಾಗಿದ್ದು ಈ ಫೋಟೋ ವೈರಲ್ ಆಗಿದೆ. ‘ನೀವೇ ಹೀಗೆ ಮಾಡಿದರೆ ಇತರರಿಗೆ ಹೇಗೆ ಮಾದರಿಯಾಗುತ್ತೀರಿ?’ ಎನ್ನುವುದು ನೆಟ್ಟಿಗರ ಪ್ರಶ್ನೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *