IND vs AUS T20 Series : ಇಂಡಿಯಾ ಇವತ್ತು ವಿನ್ ಆದ್ರೆ ಟಿ-20 ಟ್ರೋಫಿ – ಕಾಂಗರೂ ಪಡೆಗೆ ಪ್ರತಿಷ್ಠೆಯ ಹೋರಾಟ : ಟೀಂ ಹೇಗಿರಲಿದೆ?

IND vs AUS T20 Series : ಇಂಡಿಯಾ ಇವತ್ತು ವಿನ್ ಆದ್ರೆ ಟಿ-20 ಟ್ರೋಫಿ – ಕಾಂಗರೂ ಪಡೆಗೆ ಪ್ರತಿಷ್ಠೆಯ ಹೋರಾಟ : ಟೀಂ ಹೇಗಿರಲಿದೆ?

ನ್ಯೂಸ್ ಆ್ಯರೋ : ಕ್ರಿಕೆಟ್ ಅಭಿಮಾನಿಗಳಂತೂ ಇವತ್ತಿನ ಪಂದ್ಯ ನೋಡಲು ಅತ್ಯಂತ ಕಾತರದಿಂದ ಕಾಯುತ್ತಿರಬಹುದು. ಟ್ವೆಂಟಿ- ಟ್ವೆಂಟಿ ಕ್ರಿಕೆಟ್ ನಡೆಯುತ್ತಿದೆ.‌ ಟೀಂ ಇಂಡಿಯಾ ರೋಚಕ ಜಯ ಗಳಿಸುತ್ತಲೇ ಇದೆ.

ಇವತ್ತು ಭಾರತ- ಆಸೀಸ್ ಮಧ್ಯೆ ಮೂರನೇ 20-20ಪಂದ್ಯ ನಡೆಯಲಿದೆ. ಗುವಾಹಟಿ ಮೈದಾನದಲ್ಲಿ ನಡೆಯಲಿರುವ ಈ ರೋಚಕ ಪಂದ್ಯದಲ್ಲಿ ಫಲಿತಾಂಶ ನಿರ್ಣಯವಾಗಲಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.

ಸದ್ಯ ಭಾರತ ತಂಡದಲ್ಲಿ ಒಂದು ಬದಲಾವಣೆ ನಿರೀಕ್ಷೆ ಮಾಡಲಾಗಿದ್ದು, ದುಬಾರಿಯಾಗುತ್ತಿರುವ ಪ್ರಸಿದ್ಧ್ ಕೃಷ್ಣ ಬದಲಿಗೆ ಶಿವಂ ದುಬೆ ಇಲ್ಲವೇ ಆವೇಶ್ ಖಾನ್ ತಂಡ ಸೇರಬಹುದು.

ಟೀಂ ಇಂಡಿಯಾ ಹೀಗಿದೆ..

ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ (ಆವೇಶ್ ಖಾನ್)

ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್ ಸಂಗಾ

ಆಸ್ಟ್ರೇಲಿಯಾಕ್ಕಿದು ಪ್ರತಿಷ್ಠೆಯ ಹೋರಾಟ…!

ಈಗಾಗಲೇ ಎರಡು ಪಂದ್ಯಗಳಲ್ಲಿ ವಿಜಯಿಶಾಲಿಗಳಾಗಿರುವ ಟೀಂ ಇಂಡಿಯಾ ಈ ಪಂದ್ಯವನ್ನೂ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಈಗಾಗಲೇ ಮುಖಭಂಗ ಎದುರಿದಿರುವ ಆಸ್ಟ್ರೇಲಿಯಾ ಪಡೆಗೆ ಇವತ್ತು ನಡೆಯುತ್ತಿರುವ ಪಂದ್ಯ ಅಗ್ನಿಪರೀಕ್ಷೆಯಾಗಿದೆ. ಪ್ರತಿಷ್ಠೆಯ ಹೋರಾಟವಾಗಲಿದೆ. ಕಾಂಗರೂ ಪಡೆಯಲ್ಲಿ ಬ್ಯಾಟಿಂಗ್ ಕ್ರಮಾಂಕ ಹಾಗೂ ಆಟಗಾರರ ಬದಲಾವಣೆ ಸಾಧ್ಯತೆ ಇದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *