India Vs Ireland T20 : ಇಂದಿನಿಂದ ಮೂರು ಪಂದ್ಯಗಳ ಟಿ-20 ಸರಣಿ – ಬೂಮ್ರಾ ನಾಯಕತ್ವದಲ್ಲಿ ಭಾರತ ತಂಡ ಸಜ್ಜು

India Vs Ireland T20 : ಇಂದಿನಿಂದ ಮೂರು ಪಂದ್ಯಗಳ ಟಿ-20 ಸರಣಿ – ಬೂಮ್ರಾ ನಾಯಕತ್ವದಲ್ಲಿ ಭಾರತ ತಂಡ ಸಜ್ಜು

ನ್ಯೂಸ್ ಆ್ಯರೋ : ಐರ್ಲೆಂಡ್‌ ವಿರುದ್ಧದ ಟಿ-20 ಸರಣಿಯ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯ ಇಂದು ನಡೆಯಲಿದ್ದು, ಗಾಯದಿಂದ ಚೇತರಿಸಿರುವ ಜಸ್ಪ್ರೀತ್‌ ಬೂಮ್ರಾ ನಾಯಕತ್ವದಲ್ಲಿ ಭಾರತ ತಂಡ ಸಜ್ಜುಗೊಂಡಿದೆ.

ಮುಂಬರುವ ಏಕದಿನ ಏಷ್ಯಾಕಪ್‌ ಹಾಗೂ ವಿಶ್ವಕಪ್‌ ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಲು ಕಸರತ್ತು ನಡೆಸುತ್ತಿರುವ ಬಿಸಿಸಿಐ ಶುಕ್ರವಾರದಿಂದ ಆರಂಭವಾಗುವ ಐರ್ಲೆಂಡ್ ವಿರುದ್ಧದ ಸರಣಿಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ.

ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬೂಮ್ರಾ ಬರೋಬ್ಬರಿ 11 ತಿಂಗಳ ಬಳಿಕ ಕಣಕ್ಕೆ ಇಳಿದಿದ್ದಾರೆ. ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಇದೀಗ ಐರ್ಲೆಂಡ್‌ ಸರಣಿಯಲ್ಲಿ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದಾರೆ.

ಈ ಸರಣಿಯು ಹಲವು ಯುವ ಆಟಗಾರರಿಗೆ 2024ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಆಯ್ಕೆಗಾರರ ಗಮನ ಸೆಳೆಯಲು ಅವಕಾಶವೂ ಸಿಗಲಿದೆ. ವಿಂಡೀಸ್‌ ಸರಣಿಯಲ್ಲಿ ಅನುಭವಿ ಆಟಗಾರರೊಂದಿಗೆ ಹೊಸಬರನ್ನು ಕಣಕ್ಕಿಳಿಸುವ ಪ್ರಯೋಗ ಮಾಡಿದ್ದ ಟೀಂ ಇಂಡಿಯಾ 2-3ರಿಂದ ಸರಣಿ ಸೋತು ನಿರಾಸೆ ಅನುಭವಿಸಿತ್ತು. ಇದೀಗ ಐರ್ಲೆಂಡ್‌ ಸರಣಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮಣೆಹಾಕಿರುವುದು ಕುತೂಹಲ ಮೂಡಿಸಿದೆ.

ಬೂಮ್ರಾ ಜೊತೆ ಮತ್ತೊಬ್ಬ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಸಹ ಹಲವು ತಿಂಗಳ ಬಳಿಕ ಕ್ರಿಕೆಟ್‌ಗೆ ವಾಪಾಸಾಗಿದ್ದಾರೆ. ಏಷ್ಯಾಕಪ್ ಹಾಗೂ ವಿಶ್ವಕಪ್ ತಂಡಕ್ಕೆ ಆಯ್ಕೆ ನಿರೀಕ್ಷೆಯಲ್ಲಿರುವ ಈ ಇಬ್ಬರು, ಫಿಟ್‌ನೆಸ್‌ ಸಾಬೀತುಪಡಿಸಲು ಎದುರು ನೋಡುತ್ತಿದ್ದಾರೆ.

2023ರ ಐಪಿಎಲ್‌ನಲ್ಲಿ ಮಿಂಚಿದ ಜಿತೇಶ್‌ ಶರ್ಮಾ, ರಿಂಕು ಸಿಂಗ್, ಋತುರಾಜ್ ಗಾಯಕ್ವಾಡ್ ಜತೆಗೆ ವಿಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿ ಮೂಲಕ ಟೀಂ ಇಂಡಿಯಾಕ್ಕೆ ಆರಂಭಿಕನಾಗಿ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್‌ ಮೇಲೂ ನಿರೀಕ್ಷೆ ಇಡಲಾಗಿದೆ.

ಭಾರತ ತಂಡ ಇಂತಿದೆ:
ಜಸ್ಪ್ರೀತ್ ಬೂಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

ಪಂದ್ಯ ಯಾವಾಗ?:
ಮೊದಲ ಟಿ20 ಆಗಸ್ಟ್‌ 18
2ನೇ ಟಿ20 ಆಗಸ್ಟ್‌ 20
3ನೇ ಟಿ20 ಆಗಸ್ಟ್‌ 23

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *