ಅಂಡರ್ 19 ಮಹಿಳಾ ವಿಶ್ವಕಪ್ ಗೆದ್ದು ಬೀಗಿದ ಭಾರತದ ವನಿತೆಯರು – ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ ಗಳ ಸುಲಭ ಜಯ

ಅಂಡರ್ 19 ಮಹಿಳಾ ವಿಶ್ವಕಪ್ ಗೆದ್ದು ಬೀಗಿದ ಭಾರತದ ವನಿತೆಯರು – ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ ಗಳ ಸುಲಭ ಜಯ

ನ್ಯೂಸ್ ಆ್ಯರೋ : ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯ ಚೊಚ್ಚಲ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಮಹಿಳಾ ತಂಡ ಪ್ರಶಸ್ತಿ ಜಯಿಸಿದೆ.

ದಕ್ಷಿಣ ಆಫ್ರಿಕಾದ ಪೊಟ್ಚೆಫ್ಸ್ಟ್ರೂಮ್ ನ ಸೆನ್ವೆಸ್ ಪಾರ್ಕ್ ನಲ್ಲಿ ಇಂದು ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ ಮಹಿಳಾ ಯುವ ಪಡೆ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿಯಾಗಿ ಮಣಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟಿದೆ.

ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಭಾರತೀಯ ಬೌಲರ್ ಗಳ ಸಾಂಘಿಕ ಆಕ್ರಮಣಕ್ಕೆ ಪತರಗುಟ್ಟಿ ರನ್ ಗಳಿಸಲು ಪರದಾಡಿತು. ಇಂಗ್ಲೆಂಡ್ ನ ನಾಲ್ಕು ಮಂದಿ ಆಟಗಾರ್ತಿಯರು ಮಾತ್ರ ಎರಡಂಕಿ ಮೊತ್ತ ಕಲೆ ಹಾಕಿದರೆ, 7 ಮಂದಿ ಆಟಗಾರ್ತಿಯರು ಒಂದಂಕಿಗೇ ಔಟಾಗಿ ನಿರಾಶೆ ಅನುಭವಿಸಿದರು.

ಅದರಲ್ಲೂ ಮೂರು ಮಂದಿ ಶೂನ್ಯ ಸುತ್ತಿರುವುದು ಭಾರತದ ಬೌಲಿಂಗ್ ಪಾರಮ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಭಾರತದ ಪರ ಟೈಟಸ್ ಸಾಧು, ಅರ್ಚನಾ ದೇವಿ, ಪಾರ್ಸವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಮನ್ನತ್ ಕಶ್ಯಪ್, ನಾಯಕಿ ಶೆಫಾಲಿ ವರ್ಮಾ, ಸೋನಮ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

ಇಂಗ್ಲೆಂಡ್ ಮಹಿಳಾ ಯುವ ತಂಡ ನೀಡಿದ 69 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಭಾರತ ಮಹಿಳಾ ತಂಡ ಕೇವಲ 14 ಓವರ್ ನಲ್ಲಿಯೇ 3 ವಿಕೆಟ್ ಕಳೆದು ಗುರಿ ಸಾಧಿಸಿತು.  ಭಾರತದ ಪರ ನಾಯಕಿ ಶೆಫಾಲಿ 15 ರನ್ ಗಳಿಸಿದರೆ, ತ್ರಿಶಾ ಹಾಗೂ ಸೌಮ್ಯ ತಿವಾರಿ ತಲಾ 24 ರನ್ ಗಳಿಸಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *