ಹಣೆಗೆ ತಿಲಕ ಇಡಲು ತಿರಸ್ಕರಿಸಿದ ಟೀಂ ಇಂಡಿಯಾದ ಸಿರಾಜ್, ಉಮ್ರಾನ್ ಮಲಿಕ್ – ಪರ ವಿರೋಧ ಚರ್ಚೆಗೆ ಕಾರಣವಾಯ್ತು ವೈರಲ್ ವಿಡಿಯೋ…!!

ಹಣೆಗೆ ತಿಲಕ ಇಡಲು ತಿರಸ್ಕರಿಸಿದ ಟೀಂ ಇಂಡಿಯಾದ ಸಿರಾಜ್, ಉಮ್ರಾನ್ ಮಲಿಕ್ – ಪರ ವಿರೋಧ ಚರ್ಚೆಗೆ ಕಾರಣವಾಯ್ತು ವೈರಲ್ ವಿಡಿಯೋ…!!

ನ್ಯೂಸ್ ಆ್ಯರೋ : ಟೀಂ ಇಂಡಿಯಾದ ಆಟಗಾರರಾದ ಮೊಹಮ್ಮದ್ ಸಿರಾಜ್ ಹಾಗೂ ಉಮ್ರಾನ್‌ ಮಲಿಕ್‌ ತಮ್ಮ ಹಣೆಗೆ ತಿಲಕ ಇಡುವುದನ್ನು ತಿರಸ್ಕರಿಸಿದ್ದಾರೆ ಎಂಬ ಕಾರಣಕ್ಕೆ ಭಾರೀ ಚರ್ಚೆಗೆ ಕಾರಣವಾಗಿದ್ದಾರೆ. ಸದ್ಯ, ಈ ಇಬ್ಬರು ಆಟಗಾರರಿಗೆ ಸ್ವಾಗತ ಕೋರುವವರು ಕುಂಕುಮ‌ ಇಡುತ್ತಿದ್ದಂತೆ ಬೇಡ ಎಂದು ತಿರಸ್ಕರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರರು ಹೋಟೆಲ್‌ಗೆ ತೆರಳುತ್ತಿದ್ದ ವಿಡಿಯೋ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಆಟಗಾರರಿಗೆ ಸ್ವಾಗತ ಏರ್ಪಡಿಸಲಾಗಿತ್ತು. ಭಾರತೀಯ ಬೌಲರ್‌ಗಳಾದ ಸಿರಾಜ್ ಹಾಗೂ ಉಮ್ರಾನ್ ಮಲಿಕ್ ಈ ವೇಳೆ ತಮ್ಮ ಹಣೆಗೆ ತಿಲಕ ಇಡದಂತೆ ಹೊಟೇಲ್ ಸಿಬ್ಬಂದಿಗಳನ್ನು‌ ತಡೆದಿದ್ದಾರೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರಲ್ಲಿ ಕೆಲವರು ‘ಹಾಗೆ ಮಾಡಬಾರದಿತ್ತು, ಅದು ಭಾರತೀಯ ಸಂಸ್ಕೃತಿಯ ಪ್ರಕಾರ ಸ್ವಾಗತಿಸುವುದಲ್ಲವೇ’ ಎಂದರೆ, ಮತ್ತೆ ಕೆಲವರು ‘ಆಟಗಾರರು ಮಾಡಿದ್ದು‌ ಸರಿ, ಅವರು ಅವರ ಧರ್ಮದ‌ ಪ್ರಕಾರ ನಡೆದುಕೊಂಡಿದ್ದಾರೆ ಅದರಲ್ಲೇನು ತಪ್ಪದೆ’ ಎಂದು ಪ್ರಶ್ನಿಸಿದ್ದಾರೆ.

ಆದರೆ ಇದೇ ವೇಳೆ ತಿಲಕವನ್ನು ತಿರಸ್ಕರಿಸಿದ ಟೀಂ ಇಂಡಿಯಾದ ಬ್ಯಾಟಿಂಗ್‌ ಕೋಚ್ ವಿಕ್ರಮ್ ರಾಥೋರ್ ಅವರನ್ನು‌ ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಆದರೆ ಕೆಲವರ ಪ್ರಕಾರ, ಇದು ಹಳೆಯ ವಿಡಿಯೋ. ಏಕೆಂದರೆ ಆಸ್ಟ್ರೇಲಿಯಾ ಪರ ಟೆಸ್ಟ್ ಸರಣಿಗೆ ಆಯ್ಕೆಯಾಗಿಲ್ಲ. ಆದರೂ ವಿಡಿಯೋದಲ್ಲಿ ಅವರಿದ್ದಾರೆ. ಇದು ಶ್ರೀಲಂಕಾ ಅಥವಾ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದ ವೇಳೆ ನಡೆದಿರುವ ಘಟನೆಯಾಗಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ವಿಡಿಯೋ ಮಾತ್ರ ಪರ – ವಿರೋಧ ಚರ್ಚೆಗೆ ಆಹಾರವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *