T20 ಕ್ರಿಕೆಟ್‌ನಲ್ಲಿ ಶತಕ‌ ಸಿಡಿಸಿ ಕೊಹ್ಲಿ ದಾಖಲೆ ಮುರಿದ ಶುಭಮನ್ ಗಿಲ್ – ಒಂದೇ ಶತಕ, ಬರೆದ ದಾಖಲೆಗಳೆಷ್ಟು ಗೊತ್ತಾ…!?

T20 ಕ್ರಿಕೆಟ್‌ನಲ್ಲಿ ಶತಕ‌ ಸಿಡಿಸಿ ಕೊಹ್ಲಿ ದಾಖಲೆ ಮುರಿದ ಶುಭಮನ್ ಗಿಲ್ – ಒಂದೇ ಶತಕ, ಬರೆದ ದಾಖಲೆಗಳೆಷ್ಟು ಗೊತ್ತಾ…!?

ನ್ಯೂಸ್ ಆ್ಯರೋ : ‘ಟಿ20 ಕ್ರಿಕೆಟ್ ಆಡಲು ಶುಭಮನ್‌‌ ಗಿಲ್‌‌ ಅರ್ಹನಲ್ಲ’ ಎಂದವರಿಗೆ ಗಿಲ್ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಟೀಂ ಇಂಡಿಯಾದ ಭರವಸೆಯ‌ ಯುವ ಆಟಗಾರ‌ ಎನಿಸಿಕೊಂಡಿರುವ ಗಿಲ್ ಬಾರಿಸಿದ ಶತಕ ಕ್ರಿಕೆಟ್ ಇತಿಹಾಸ ಹಲವು ಇತಿಹಾಸಗಳನ್ನು‌ ಅಳಿಸಿ ಹಾಕಿದೆ.

ಜನವರಿಯಲ್ಲಿ‌ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟಿ20 ಕ್ರಿಕೆಟ್ ಪಾದಾರ್ಪಣೆ ಮಾಡಿದ ಗಿಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಆದರೆ ಫೆ.1 ರಂದು ನ್ಯೂಜಿಲೆಂಡ್ ಹಾಗೂ ಟೀಂ‌ ಇಂಡಿಯಾ ನಡುವೆ ನಡೆದ ಮೂರನೇ ಟಿ20‌ ಪಂದ್ಯಾಟ ಎರಡೂ ತಂಡಗಳಿಗೂ ನಿರ್ಣಾಯಕ ಪಂದ್ಯಾಟವಾಗಿತ್ತು. ಇದೇ ಪಂದ್ಯಾದಲ್ಲಿ ಘರ್ಜಿಸಿದ ಯುವ ಬ್ಯಾಟರ್ ಶುಭಮನ್ ಗಿಲ್ ತಾನು ಎದುರಿಸಿದ 63 ಎಸೆತಗಳಲ್ಲಿ 7 ಸಿಕ್ಸರ್ 12 ಬೌಂಡರಿಗಳೊಂದಿಗೆ 126 ರನ್ ಬಾರಿಸಿ ದಾಖಲೆ‌ ನಿರ್ಮಿಸಿದ್ದಾರೆ.

ಇದರೊಂದಿಗೆ ಸುರೇಶ್ ರೈನಾ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ಕೆ.ಎಲ್. ರಾಹುಲ್ ಬಳಿಕ ಟಿ20-ಐ ನಲ್ಲಿ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಗಿಲ್ ಪಾತ್ರವಾಗಿದ್ದಾರೆ.

ಐದನೇ ಗರಿಷ್ಠ ಸ್ಕೋರ್‌ ದಾಖಲಿಸಿದ ಟೀಂ ಇಂಡಿಯಾ
ನ್ಯೂಜಿಲೆಂಡ್ ವಿರುದ್ದದ ಮೂರನೇ ಟಿ20 ಸರಣಿ ಎರಡು ತಂಡಗಳಿಗೂ ‘ಮಾಡು ಇಲ್ಲವೇ ಮಡಿ’ ಪಂದ್ಯಾಟವಾಗಿತ್ತು. ಈ ಪಂದ್ಯದಲ್ಲಿ ಎದುರಾಳಿಗಳಿಗೆ ಅಕ್ಷರಶಃ ಸಿಂಹ ಸ್ವಪ್ನವಾಗಿ ಕಾಡಿದ ಭಾರತದ ಯುವ ಬ್ಯಾಟರ್ ಶುಭಮನ್ ಗಿಲ್ ಭಾರಿಸಿದ 126 ರನ್ ಗಳ ಅಬ್ಬರದ ಶತಕದ ನೆರವಿನಿಂದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 234 ರನ್ ಒಟ್ಟುಗೂಡಿಸುವಲ್ಲಿ ಶಕ್ತವಾಯಿತು. ಇದು ಟಿ20-ಐ‌ ನಲ್ಲಿ ಟೀಂ ಇಂಡಿಯಾ ಗಳಿಸಿದ ಐದನೇ ಗರಿಷ್ಠ ಸ್ಕೋರ್. ಈ ಹಿಂದೆ 2017ರಲ್ಲಿ ಶ್ರೀಲಂಕಾ ವಿರುದ್ಧ 260 ರನ್ ಗಳಿಸಿರುವುದು ಭಾರತದ ಶ್ರೇಷ್ಠ ಪ್ರದರ್ಶನವಾಗಿದೆ.

ಕೊಹ್ಲಿ ದಾಖಲೆ ಬ್ರೇಕ್‌ ಮಾಡಿದ ಗಿಲ್
ಸದ್ಯ, ಶುಭಮನ್ ಗಿಲ್ ಟಿ20-ಐ‌ ನಲ್ಲಿ ಅಜೇಯ 126 ರನ್ ನೆರವಿನಿಂದ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾದ ಕಿಂಗ್ ಕೊಹ್ಲಿಯವರ ದಾಖಲೆ ಮುರಿದಿದ್ದಾರೆ. ಈ ಹಿಂದೆ 2022 ಏಷ್ಯಾ ಕಪ್ ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಅಜೇಯ 122 ರನ್ ಗಳಿಸಿ ದಾಖಲೆ ಸೃಷ್ಟಿಸಿದ್ದರು.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *