ಮತ್ತೊಬ್ಬ ಶ್ರೀಲಂಕಾದ ಕ್ರಿಕೆಟ್ ಆಟಗಾರ ಒಂದು ವರ್ಷ ಬ್ಯಾನ್ – ಗುಣತಿಲಕ ಬಳಿಕ ಚಾಮಿಕಾ ಕರುಣಾರತ್ನೆ ಅವರಿಗೂ ನಿಷೇಧದ ಶಿಕ್ಷೆ

ಮತ್ತೊಬ್ಬ ಶ್ರೀಲಂಕಾದ ಕ್ರಿಕೆಟ್ ಆಟಗಾರ ಒಂದು ವರ್ಷ ಬ್ಯಾನ್ – ಗುಣತಿಲಕ ಬಳಿಕ ಚಾಮಿಕಾ ಕರುಣಾರತ್ನೆ ಅವರಿಗೂ ನಿಷೇಧದ ಶಿಕ್ಷೆ

ನ್ಯೂಸ್ ಆ್ಯರೋ : ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವ ಕಪ್ ನಲ್ಲಿ ಆಟಗಾರರ ಒಪ್ಪಂದದ ಹಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾ ಕ್ರಿಕೆಟ್ ಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಅಮಾನತುಪಡಿಸಿದೆ.

ಕರುಣಾರತ್ನೆ ಹೇಗೆ ಹಲವು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಶ್ರೀಲಂಕಾ ಕ್ರಿಕೆಟ್ ಹೆಚ್ಚು ವಿವರಿಸಿಲ್ಲ. ಆದರೆ, ತನ್ನ ವಿರುದ್ಧದ ಎಲ್ಲಾ ಆರೋಪಿಗಳಿಗೆ ತಪ್ಪೊಪ್ಪಿಕೊಂಡಿದ್ದು, 5,000 ಡಾಲರ್ ದಂಡವನ್ನೂ ವಿಧಿಸಲಾಗಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ತನಿಖಾ ಸಮಿತಿಯ ಸಂಶೋಧನೆಗಳು ಮತ್ತು ಶಿಫಾರಸುಗಳ ನಂತರ, ಎಸ್ಎಲ್ಸಿಯ ಕಾರ್ಯಕಾರಿ ಸಮಿತಿಯು ಎಲ್ಲಾ ಪ್ರಕಾರದ ಕ್ರಿಕೆಟ್ ನಲ್ಲಿ ಭಾಗವಹಿಸದಂತೆ ಒಂದು ವರ್ಷ ನಿಷೇಧಿಸಲಾಗಿದೆ ಮತ್ತು ಒಂದು ವರ್ಷದ ಅವಧಿಗೆ ಅಮಾನತುಗೊಳಿಸಲಾಗುತ್ತದೆ ಎಂದು ಎಸ್ಎಲ್ಸಿ ತಿಳಿಸಿದೆ.

ಕರುಣಾರತ್ನೆ ಮಾಡಿದ ಉಲ್ಲಂಘನೆಗಳ ಗಂಭೀರತೆ ಪರಿಗಣಿಸಿ, ಆತನ ಕ್ರಿಕೆಟ್ ಭವಿಷ್ಯದ ಮೇಲೆ ಪರಿಣಾಮ ಬೀರದಂತೆ ಮತ್ತು ಮುಂದೆ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಬೇಕಾಗಿದೆ ಎಂದು ತನಿಖಾ ಸಮಿತಿಯು ತನ್ನ ವರದಿಯಲ್ಲಿ ಕಾರ್ಯಕಾರಿ ಸಮಿತಿಗೆ ಶಿಫಾರಸು ಮಾಡಿತ್ತು. ಶ್ರೀಲಂಕಾ ವಿಶ್ವಕಪ್ನ ಸೆಮಿಫೈನಲ್ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು. ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗಾಗಿ ಎಸ್ಎಲ್ಸಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ಸಹ ರಚಿಸಿದೆ. ಅಲ್ಲದೇ ಈಗಾಗಲೇ ಧನುಷ್ಕ‌ ಗುಣತಿಲಕ ಅವರಿಗೂ ನಿಷೇಧ ಹೇರಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *