CWC2023 : ವಿಶ್ವಕಪ್ ನಿಂದ ಹಾರ್ದಿಕ್ ಪಾಂಡ್ಯ ಔಟ್ – ಪ್ರತಿಭಾನ್ವಿತ ವೇಗಿ ಟೀಂ ಇಂಡಿಯಾಗೆ ಎಂಟ್ರಿ..!

CWC2023 : ವಿಶ್ವಕಪ್ ನಿಂದ ಹಾರ್ದಿಕ್ ಪಾಂಡ್ಯ ಔಟ್ – ಪ್ರತಿಭಾನ್ವಿತ ವೇಗಿ ಟೀಂ ಇಂಡಿಯಾಗೆ ಎಂಟ್ರಿ..!

ನ್ಯೂಸ್ ಆ್ಯರೋ : ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ಮೊಣಕಾಲಿಗೆ ಗಾಯಗೊಂಡು ವಿಶ್ರಾಂತಿಯಲ್ಲಿದ್ದ ಭಾರತ ತಂಡದ ಆಲ್‌ರೌಂಡರ್‌ ಆಟಗಾರ ಹಾರ್ದಿಕ್ ಪಾಂಡ್ಯ ಇದೀಗ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದಿದ್ದಾರೆ. ಇದರಿಂದ ಗೆಲುವಿನ ನಾಗಲೋಟದಲ್ಲಿರುವ ಭಾರತ ತಂಡಕ್ಕೆ ಆಘಾತವಾಗಿದೆ.

ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಸಂದರ್ಭದಲ್ಲಿ ಕಾಲಿನ ನೋವಿಗೆ ತುತ್ತಾಗಿದ್ದರು. ಕೇವಲ ಮೂರು ಎಸೆತ ಬೌಲಿಂಗ್ ಮಾಡಿದ್ದ ಅವರು ನಂತರ ಮೈದಾನ ತೊರೆದಿದ್ದರು. ಆರಂಭದಲ್ಲಿ ಸಾಮಾನ್ಯ ಗಾಯ ಎಂದು ಭಾವಿಸಲಾಗಿತ್ತಾದರೂ ಬಳಿಕ ಗಾಯದ ತೀವ್ರತೆ ಹೆಚ್ಚಾಗಿರುವುದು ಕಂಡುಬಂದಿತ್ತು. ಹೀಗಾಗಿ ಎನ್‌ಸಿಎಗೆ ತೆರಳಿ ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದರು.

ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಬೆಂಗಳೂರಿನಲ್ಲಿ ನಡೆಯಲಿರುವ ನೆದರ್‌ಲ್ಯಾಂಡ್ಸ್‌ ವಿರುದ್ಧದ ಪಂದ್ಯಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಹಾರ್ದಿಕ್ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಬೀಳುವಂತಾಗಿದೆ. ಹೀಗಾಗಿ ಭಾರತ ತಂಡವು ಪ್ರಮುಖ ಆಲ್‌ರೌಂಡರ್‌ ಆಟಗಾರನನ್ನು ಕಳೆದುಕೊಂಡಿದೆ.

ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರಿಗೆ ಬುಲಾವ್ ನೀಡಲಾಗಿದೆ. ಈ ಮೂಲಕ ಕೆ ಎಲ್‌ ರಾಹುಲ್ ಜತೆಗೆ ಭಾರತ ತಂಡದಲ್ಲಿ ಇಬ್ಬರು ಕರ್ನಾಟಕದ ಆಟಗಾರರು ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರತಿಭಾನ್ವಿತ ವೇಗಿಗೆ ಅದೃಷ್ಟ ಖುಲಾಯಿಸಿದ್ದು, ಪ್ರಸಿದ್ಧ್ ಕೃಷ್ಣ ಕೂಡ ಸುದೀರ್ಘ ಕಾಲ ಗಾಯದಿಂದ ಮೈದಾನದಿಂದ ದೂರವಾಗಿದ್ದರು. ಈ ವರ್ಷ ಜಸ್ಪ್ರೀತ್ ಬೂಮ್ರಾ ಜೊತೆಗೆ ಕಳೆದ ಐರ್ಲೆಂಡ್ ಪ್ರವಾಸದ ಮೂಲಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು. ಆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದ್ದರು.

ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಪಂದ್ಯಗಳನ್ನು ಗೆದ್ದು 14 ಅಂಕಗಳನ್ನು ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈಗಾಗಲೇ ಸೆಮಿಫೈನಲ್‌ಗೆ ಪ್ರವೇಶ ಪಡೆದಿದ್ದು, ಭಾನುವಾರ ದಕ್ಷಿಣ ಆಫ್ರಿಕಾದ ವಿರುದ್ಧ ಸೆಣಸಲಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *