ವಿರಾಟ್ ಬಳಸೋ ಬ್ಯಾಟ್ ನ ಬೆಲೆ ಎಷ್ಟು ಗೊತ್ತಾ…!?

ವಿರಾಟ್ ಬಳಸೋ ಬ್ಯಾಟ್ ನ ಬೆಲೆ ಎಷ್ಟು ಗೊತ್ತಾ…!?

ನ್ಯೂಸ್‌ ಆ್ಯರೋ : ಭಾರತೀಯ ತಂಡ ಸ್ಫೋಟ ಬ್ಯಾಟ್ಸ್‌ಮನ್‌ ವಿರಾಟ್ ಕೊಹ್ಲಿ ಕೆಲ ದಿನಗಳ ವಿಶ್ರಾಂತಿಯ ಬಳಿಕ ಮೈದಾನದಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ. ಜನವರಿ 10 ರಂದು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ 2023ರ ವರ್ಷದ ಮೊದಲ ಪಂದ್ಯವನ್ನು ಆಡಲಿದ್ದಾರೆ.

ವಿರಾಟ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಭಾಗವಾಗಿರಲಿಲ್ಲ. ಅವರನ್ನು ಹೊರತುಪಡಿಸಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ವಿರಾಟ್ ಸೇರಿದಂತೆ ಹಿರಿಯ ಆಟಗಾರರು ಮತ್ತೆ ತಂಡ ಸೇರಿದ್ದು, ಮತ್ತೆ ತಂಡದಲ್ಲಿ ಹೊಸ ಉತ್ಸಾಹ ಮೂಡಿದೆ.

ಟೀಂ ಇಂಡಿಯಾ ಈಗ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ವಿಶ್ರಾಂತಿಯಲ್ಲಿದ್ದ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಗುವಾಹಟಿ ತಲುಪಿದ್ದಾರೆ. ಅವರ ಕೆಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ, ಅದರಲ್ಲಿ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದಾರೆ.

ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸಲಿದ್ದಾರೆ. ಇದಕ್ಕೂ ಮುನ್ನ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿತ್ತು.

ಅಬ್ಬರಿಸಲು ರೆಡಿಯಾಗಿದ್ದಾರೆ ಕಿಂಗ್‌ ಕೊಹ್ಲಿ

ಕೆಲ ದಿನಗಳ ವಿಶ್ರಾಂತಿಯ ಬಳಿಕ ತಂಡಕ್ಕೆ ಮರಳಿರುವ ಕಿಂಗ್‌ ಕೊಹ್ಲಿ ಮತ್ತೆ ಅಬ್ಬರಿಸಲು ಸಿದ್ಧತೆ ನಡೆಸಿದ್ದಾರೆ. ಹೊಸ ವರ್ಷದಲ್ಲಿ ಹೊಸ ಭರವಸೆಯನ್ನು ಮೂಡಿಸುವ ವಿಶ್ವಾಸದಲ್ಲಿದ್ದಾರೆ. ವಿರಾಟ್ ಬಳಿ ಹಲವು ಬ್ಯಾಟ್ ಗಳಿವೆ. ನಾವು ಬ್ರ್ಯಾಂಡ್ ಬಗ್ಗೆ ಹೇಳುವುದಾದರೆ ಅವರು ಎಂಆರ್‌ಎಫ್‌ ನ ಬ್ರ್ಯಾಂಡ್ ತಮ್ಮ ಬ್ಯಾಟ್‌ಗೆ ಸ್ಟಿಕರ್ ಅಟ್ಟಿಸಿಕೊಳ್ಳುತ್ತಾರೆ. ಕಾರಣ ಅವರಿಗೆ ಪ್ರಾಯೋಜಕತ್ವ ನೀಡುತ್ತಾರೆ. ಇದು ಅವರ ಬ್ಯಾಟ್‌ನ ಬ್ರಾಂಡ್ ಆಗಿ ತುಂಬಾ ದಿನಗಳಿಂದ ಉಳಿದಿದೆ.

ಈ ಬ್ಯಾಟ್‌ ಅನ್ನು ವಿಲೋ ಮರದ ಕಟ್ಟಿಗೆಯಿಂದ ತಯಾರಿಸಲಾಗುತ್ತದೆ. ವಿರಾಟ್ 10-12 ಧಾನ್ಯಗಳ ಇಂಗ್ಲಿಷ್ ವಿಲೋ ಬ್ಯಾಟ್ ಅನ್ನು ಬಳಸುತ್ತಾರೆ, ಇದು ಸುಮಾರು 1200 ಗ್ರಾಂ ತೂಕ ಇರುತ್ತದೆ. ವಿರಾಟ್ ಬಳಸುವ ಬ್ಯಾಟ್ ನ ಬೆಲೆ 17 ಸಾವಿರದಿಂದ ಆರಂಭವಾಗುತ್ತದೆ. ಇದು 23-25 ​​ಸಾವಿರದವರೆಗೆ ಇದೆ ಎಂದು ಅಂದಾಜಿಸಲಾಗಿದೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *