ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಸಿಡಿಸಿದ ಕಿಂಗ್‌ ಕೊಯ್ಲಿ: ಸಚಿನ್‌ ಹೆಸರಿನಲ್ಲಿದ್ದ ಎರಡು ದಾಖಲೆಗಳು ವಿರಾಟ್‌ ತೆಕ್ಕೆಗೆ

ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಸಿಡಿಸಿದ ಕಿಂಗ್‌ ಕೊಯ್ಲಿ: ಸಚಿನ್‌ ಹೆಸರಿನಲ್ಲಿದ್ದ ಎರಡು ದಾಖಲೆಗಳು ವಿರಾಟ್‌ ತೆಕ್ಕೆಗೆ

ನ್ಯೂಸ್ ಆ್ಯರೋ: ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಸ್ಫೋಟಕ ದಾಂಡಿಗ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ 46ನೇ ಶತಕ ಸಿಡಿಸಿದ್ದಾರೆ.

ತಿರುವನಂತಪುರಂನ ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ಕೊಹ್ಲಿ ಶ್ರೀಲಂಕಾ ಬೌಲರ್ ಗಳನ್ನು ಮನಮಂದಿತೆ ದಂಡಿಸಿದರು. 110 ಎಸೆತಗಳನ್ನು ಎದುರಿಸಿದ ಕಿಂಗ್‌ ಕೊಹ್ಲಿ ಅಜೇಯ 166 ರನ್ ಚಚ್ಚಿದರು. ಕೊಹ್ಲಿ ಬ್ಯಾಟ್‌ನಿಂದ 13 ಬೌಂಡರಿ ಮತ್ತು 8 ಸಿಕ್ಸರ್‌ ಮೂಡಿಬಂದವು.

ಕಿಂಗ್‌ ಕೊಯ್ಲಿ ವಿರಾಟ್ ತಮ್ಮ 46ನೇ ಶತಕದಿಂದಾಗಿ ‘ಕ್ರಿಕಟ್‌ ದೇವರು’ ಸಚಿನ್ ತೆಂಡೂಲ್ಕರ್ ಅವರ ಎರಡು ದೊಡ್ಡ ದಾಖಲೆಗಳನ್ನು ಮುರಿದಿದ್ದಾರೆ. ಒಂದು ತಂಡದ ವಿರುದ್ಧ ಅತಿ ಹೆಚ್ಚು ಏಕದಿನ ಶತಕಗಳನ್ನು(10) ಮತ್ತು ತವರಿನಲ್ಲಿ(21) ಅತಿ ಹೆಚ್ಚು ಶತಕಗಳನ್ನು ಗಳಿಸಿ ಸಚಿನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದಾರೆ.

ಕೊಹ್ಲಿ ಮತ್ತು ಸಚಿನ್ ಅವರು ತಮ್ಮ 46ನೇ ಏಕದಿನ ಶತಕದ ಇನ್ನಿಂಗ್ಸ್‌ನಲ್ಲಿ 150ಕ್ಕಿಂತ ಹೆಚ್ಚು ವೈಯಕ್ತಿಕ ರನ್ ಗಳಿಸಿದ್ದಾರೆ. ಅಲ್ಲದೆ ಇಬ್ಬರೂ ಬ್ಯಾಟ್ಸ್ ಮನ್ ಗಳು ಅಜೇಯವಾಗಿ ಪೆವಿಲಿಯನ್ ಗೆ ಮರಳಿರುವುದು ವಿಶೇಷ. 2010ರ ಫೆಬ್ರವರಿಯಲ್ಲಿ ಸಚಿನ್, ದಕ್ಷಿಣ ಆಫ್ರಿಕಾ ವಿರುದ್ಧ ಗ್ವಾಲಿಯರ್ ಮೈದಾನದಲ್ಲಿ ತಮ್ಮ 46ನೇ ಶತಕವನ್ನು ಗಳಿಸಿದರು. ಸಚಿನ್ 147 ಎಸೆತಗಳಲ್ಲಿ 25 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಅಜೇಯ 200 ರನ್ ಪೇರಿಸಿದ್ದರು. ಇನ್ನು ಪುರುಷರ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಸಚಿನ್ ಪಾತ್ರರಾಗಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ 2008ರಲ್ಲಿ ಪದಾರ್ಪಣೆ ಮಾಡಿದ್ದ ಕೊಹ್ಲಿ ಇಲ್ಲಿಯವರೆಗೆ 258 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು 58.24ರ ಸರಾಸರಿಯಲ್ಲಿ 12,754 ರನ್ ಗಳಿಸಿದ್ದಾರೆ. ಅವರು 64 ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಮತ್ತೊಂದೆಡೆ, ಸಚಿನ್ 1989ರಲ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದು, 2013ರಲ್ಲಿ ಕೊನೆಗೊಂಡಿತು. ಸಚಿನ್ 463 ಏಕದಿನ ಗಳಲ್ಲಿ 44.83 ಸರಾಸರಿಯಲ್ಲಿ 18,426 ರನ್ ಗಳಿಸಿದ್ದಾರೆ. 49 ಏಕದಿನ ಶತಕಗಳನ್ನು ಹೊರತುಪಡಿಸಿ, 96 ಅರ್ಧಶತಕಗಳನ್ನು ಗಳಿಸಿದ್ದಾರೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *