IPL 2023 : ಮೈದಾನದಲ್ಲೇ ಕಿತ್ತಾಡಿಕೊಂಡ ಆಟಗಾರರ ವಿರುದ್ಧ ಸೆಹ್ವಾಗ್ ಆಕ್ರೋಶ – ಮಾಜಿ ಡ್ಯಾಶಿಂಗ್ ಬ್ಯಾಟ್ಸ್ಮನ್ ಹೇಳಿದ್ದೇನು?

IPL 2023 : ಮೈದಾನದಲ್ಲೇ ಕಿತ್ತಾಡಿಕೊಂಡ ಆಟಗಾರರ ವಿರುದ್ಧ ಸೆಹ್ವಾಗ್ ಆಕ್ರೋಶ – ಮಾಜಿ ಡ್ಯಾಶಿಂಗ್ ಬ್ಯಾಟ್ಸ್ಮನ್ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ಐಪಿಎಲ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಮನೋರಂಜನೆಯ ಜೊತೆಗೆ ಈ ಬಾರಿಯ ಟೂರ್ನಿ ವಿವಾದಗಳಿಂದಲೂ ಸುದ್ದಿಯಾಗುತ್ತಿದೆ. ಇತ್ತೀಚೆಗೆ ನಡೆದ ಆರ್‍ಸಿಬಿ ಮತ್ತು ಲಕ್ನೋ ತಂಡಗಳ ಜಗಳ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪಂದ್ಯ ನಡೆದ ಬಳಿಕ ಆರ್‍ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ಹಾಗೂ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಪರಸ್ವರ ಬೈದಾಡಿರುವ ಘಟನೆ ಬಗ್ಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಪ್ರತಿಕ್ರಿಯಿಸಿದ್ದಾರೆ.

”ಅಲ್ಲಿ ಕಿತ್ತಾಡಿಕೊಂಡಿರುವುದು ದೇಶದ ಇಬ್ಬರು ಐಕಾನ್​ಗಳು. ಸೋತವರು ಸದ್ದಿಲ್ಲದೆ ಸೋಲನ್ನು ಸ್ವೀಕರಿಸಿ ಹೊರನಡೆಯಬೇಕು. ಗೆದ್ದ ತಂಡ ಸಂಭ್ರಮಿಸಬೇಕು ಅಷ್ಟೇ. ಇಲ್ಲಿ ಇಬ್ಬರು ಪರಸ್ಪರ ಮಾತಿನ ಚಕಮಕಿಗೆ ಇಳಿಯುವ ಅವಶ್ಯಕತೆ ಏನಿತ್ತು?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಹ್ವಾಗ್ ಮಾತನಾಡಿ, ”ಇಂತಹ ಘಟನೆಗಳು ನಡೆದರೆ ಬಿಸಿಸಿಐ ಅಂತಹವರನ್ನು ನಿಷೇಧಿಸಬೇಕು. ಇದರಿಂದ ಇಂತಹ ಅಹಿತಕರ ಘಟನೆಗಳು ನಡೆಯುವುದಿಲ್ಲ ಅಥವಾ ಅಪರೂಪವಾಗುತ್ತದೆ. ಈ ಹಿಂದೆ ಇಂತಹ ಘಟನೆಗಳು ಹಲವಾರು ಬಾರಿ ನಡೆದಿವೆ. ಹೀಗಾಗಿ ಈ ಬಗ್ಗೆ ಬಿಸಿಸಿಐ ಕಠಿಣ ನಿಲುವು ತೆಗೆದುಕೊಳ್ಳುವುದು ಉತ್ತಮ” ಎಂದಿದ್ದಾರೆ.

ಕೊಹ್ಲಿ ಮತ್ತು ಗಂಭೀರ್ ಅನೇಕ ಮಕ್ಕಳಿಗೆ ರೋಲ್ ಮಾಡೆಲ್, ಅವರು ಏನಾದರೂ ಮಾಡಿದರೆ ಅಥವಾ ಹೇಳಿದರೆ, ಲಕ್ಷಾಂತರ ಮಕ್ಕಳು ಅವರನ್ನು ಅನುಸರಿಸುತ್ತಾರೆ. ಇದೆಲ್ಲವನ್ನೂ ನಾಳೆ ಮಕ್ಕಳು ಕೂಡ ಮುಂದುವರೆಸಬಹುದು. ವಿರಾಟ್ ಕೊಹ್ಲಿ ಅಥವಾ ಗಂಭೀರ್​ಗೆ ಮಾಡಬಹುದಾದರೆ, ನಾವು ಕೂಡ ಮಾಡಬಹುದು ಎಂಬ ಭಾವನೆ ಅವರಲ್ಲಿ ಮೂಡತ್ತದೆ ಎಂದು ಸೆಹ್ವಾಗ್ ಕಳವಳ ವ್ಯಕ್ತಪಡಿಸಿದ್ದಾರೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *