Women’s World T20 ವಿಶ್ವಕಪ್ : ಇಂದು ಪಾಕ್ ವಿರುದ್ಧ ಸೆಣಸಲಿದ್ದಾರೆ ಭಾರತದ ವನಿತೆಯರು..

Women’s World T20 ವಿಶ್ವಕಪ್ : ಇಂದು ಪಾಕ್ ವಿರುದ್ಧ ಸೆಣಸಲಿದ್ದಾರೆ ಭಾರತದ ವನಿತೆಯರು..

ನ್ಯೂಸ್ ಆ್ಯರೋ : ಸದ್ಯ ಮಹಿಳಾ ಟಿ20 ವಿಶ್ವಕಪ್ ಹವಾ ಜೋರಾಗಿದ್ದು, ಭಾರತ ಮಹಿಳಾ ತಂಡ ಇಂದು ಕಪ್ ಬೇಟೆಯ ಮೊದಲ ಪಂದ್ಯ ಆಡಲಿದೆ. ಇಂದು ಸಂಜೆ ಹರ್ಮನ್‌ಪ್ರೀತ್‌ ಕೌರ್‌ ಪಡೆ ವನಿತಾ ಟಿ20 ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು ಎದುರಿಸಲಿದೆ.

ಪಾಕ್ ಭಾರತ ನಡುವಿನ ಯಾವುದೇ ಪಂದ್ಯವಿದ್ದರೂ ಅದು ಹೈವೋಲ್ಟೇಜ್ ಪಂದ್ಯವಾಗಿ ಬದಲಾಗುತ್ತದೆ. ಹಾಗೆಯೇ ಕೇಪ್ ಟೌನ್ ನಲ್ಲಿ ಇಂದೂ ಕೂಡ ಅಂತಹದ್ದೇ ಪಂದ್ಯ ನಿರೀಕ್ಷಿಸಲಾಗಿದೆ.

ಭಾರತ ಕಳೆದ ಅನೇಕ ವರ್ಷಗಳಿಂದ ಉತ್ತಮ ಸಾಧನೆಯನ್ನು ಕಾಯ್ದುಕೊಂಡು ಬಂದಿದೆ. ಆಸ್ಟ್ರೇಲಿಯ, ಇಂಗ್ಲೆಂಡ್‌ನ‌ಂಥ ಬಲಿಷ್ಠ ತಂಡಗಳಿಗೆ ಸಡ್ಡು ಹೊಡೆಯು ವಷ್ಟರ ಮಟ್ಟಿಗೆ ಬೆಳೆದಿದೆ. ಆದರೆ ಕೊನೆಯ ಹಂತದಲ್ಲಿ ಮುಗ್ಗರಿಸುವ ಪರಿಪಾಠವನ್ನು ಮಾತ್ರ ಉಳಿಸಿಕೊಂಡು ಬಂದಿದೆ. ಇಲ್ಲವಾದರೆ ಕಳೆದ ವಿಶ್ವಕಪ್‌ನಲ್ಲೇ ಭಾರತ ಚಾಂಪಿ ಯನ್‌ ಆಗಿ ಹೊರಹೊಮ್ಮಬೇಕಿತ್ತು. ಮೆಲ್ಬರ್ನ್ ಫೈನಲ್‌ನಲ್ಲಿ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿ ಆಸ್ಟ್ರೇಲಿಯಕ್ಕೆ ಶರಣಾಯಿತು.

ವಿಶ್ವಕಪ್‌ ತಯಾರಿಗೆಂದು ನಡೆದ ತ್ರಿಕೋನ ಸರಣಿಯ ಲೀಗ್‌ ಹಂತದಲ್ಲಿ ಅಜೇಯವಾಗಿ ಉಳಿದರೂ ಫೈನಲ್‌ನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ ಶರಣಾದದ್ದು ತಾಜಾ ಉದಾಹರಣೆ. ಅಲ್ಲೂ ಕೂಡ ಬಲಿಷ್ಠ ಬ್ಯಾಟಿಂಗ್ ಕ್ರಮಾಂಕ ಕುಸಿದಿತ್ತು. ಬಳಿಕ ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಕ್ಕೆ ಶರಣಾಯಿತು. ಬಾಂಗ್ಲಾದೇಶ ವಿರುದ್ಧ ಕಷ್ಟದಿಂದ ಗೆದ್ದಿತು.

ಪೇಪರ್ ನಲ್ಲಿ ಭಾರತದ ಬ್ಯಾಟಿಂಗ್ ಬಲಿಷ್ಠ. ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ‌ ಫಿಟ್ ಇಲ್ಲದ ಕಾರಣ ಯುವ ಪ್ರತಿಭೆ ಶೆಫಾಲಿ ವರ್ಮ ಮೇಲೆ ನಿರೀಕ್ಷೆ ಹೆಚ್ಚಿದೆ. ಉಳಿದಂತೆ ನಾಯಕಿ ಹರ್ಮನ್ ಪ್ರೀತ್ ಕೌರ್ ಗಾಯದಿಂದ ಚೇತರಿಸಿಕೊಂಡಿದ್ದು, ಭಾರತದ ಪಾಲಿಗೆ ಶುಭಸೂಚನೆಯಾಗಿದೆ. ರಿಚಾ ಘೋಷ್, ಜೆಮಿಮಾ ರೋಡ್ರಿಗಸ್, ಆಲ್ ರೌಂಡರ್ ದೀಪ್ತಿ ಶರ್ಮಾ ಮತ್ತು ಸ್ಟಾರ್ ಬೌಲರ್ ರೇಣುಕಾ ಠಾಕೂರ್ ಸಿಂಗ್ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ.

ಪಂದ್ಯ ಆರಂಭ: ಸಂಜೆ 6.30
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *