Yuvraj Singh : ಹೆಣ್ಣು ಮಗುವಿಗೆ ಜನ್ಮ ನೀಡಿದ ಹೇಜಲ್ ಕೀಚ್ – ಎರಡನೇ ಮಗುವಿಗೆ ತಂದೆಯಾದ ಯುವಿ

Yuvraj Singh : ಹೆಣ್ಣು ಮಗುವಿಗೆ ಜನ್ಮ ನೀಡಿದ ಹೇಜಲ್ ಕೀಚ್ – ಎರಡನೇ ಮಗುವಿಗೆ ತಂದೆಯಾದ ಯುವಿ

ನ್ಯೂಸ್ ಆ್ಯರೋ : ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​, ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್​ ಸಿಂಗ್​ ಅವರ ಪತ್ನಿ ಹೇಜಲ್​ ಕೀಚ್​ ಆಗಸ್ಟ್​ 25ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಸ್ವತಃ ಮಾಜಿ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಿದ್ರೆಯಿಲ್ಲದ ರಾತ್ರಿಗಳು ಹೆಚ್ಚು ಸಂತೋಷಕರವಾಗಿದ್ದು, ನಮ್ಮ ಪುಟ್ಟ ರಾಜಕುಮಾರಿ ಔರಾಳನ್ನು ನಾವು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಯುವರಾಜ್​ ಸಿಂಗ್​-ಹೇಜಲ್​ ಕೀಚ್​ 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ವರ್ಷ ತಮ್ಮ ಮೊದಲ ಗಂಡುಮಗು ಓರಿಯನ್‌ಗೆ ಜನ್ಮ ನೀಡಿದ್ದರು.

ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟಿರುವ ಯುವರಾಜ್ ಸಿಂಗ್ ಭಾರತ ತಂಡಕ್ಕಾಗಿ ಎಲ್ಲಾ ಸ್ವರೂಪಗಳಲ್ಲಿ 402 ಪಂದ್ಯಗಳನ್ನು ಆಡಿದ್ದಾರೆ. ಇನ್ನು 40 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅಲ್ಲಿ 33.92ರ ಸರಾಸರಿಯಲ್ಲಿ 1900 ರನ್ ಗಳಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ ನಿಜವಾಗಿಯೂ ಪ್ರವರ್ಧಮಾನಕ್ಕೆ ಬಂದಿದ್ದು ಏಕದಿನ ಕ್ರಿಕೆಟ್ ಸ್ವರೂಪದಲ್ಲಿ. ಅವರು ಆಡಿದ 304 ಪಂದ್ಯಗಳಲ್ಲಿ 36.ರ ಸರಾಸರಿಯಲ್ಲಿ 8701 ರನ್ ಬಾರಿಸಿದ್ದಾರೆ.
ಗಮನಾರ್ಹವಾಗಿ, ಯುವರಾಜ್ ಸಿಂಗ್ 14 ಶತಕಗಳು ಮತ್ತು 52 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಇದು ಅವರ ಸ್ಥಿರ ಪ್ರದರ್ಶನವನ್ನು ಎತ್ತಿ ತೋರಿಸುತ್ತದೆ. ಇದೇ ವೇಳೆ 58 ಟಿ20 ಪಂದ್ಯಗಳಲ್ಲಿ 28.02ರ ಸರಾಸರಿಯಲ್ಲಿ 1177 ರನ್‌ಗಳನ್ನು ದಾಖಲಿಸಿರುವ ಯುವರಾಜ್ ಸಿಂಗ್ ಚುಟುಕು ಸ್ವರೂಪದಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *