ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 61 ಕೈದಿಗಳಿಗೆ ಬಿಡುಗಡೆ ಭಾಗ್ಯ – ಸನ್ನಡತೆ ಆಧಾರದಲ್ಲಿ ರಿಲೀಸ್ ಹೇಗೆ? ಏನೆಲ್ಲಾ ನಿಯಮಗಳಿವೆ?

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 61 ಕೈದಿಗಳಿಗೆ ಬಿಡುಗಡೆ ಭಾಗ್ಯ – ಸನ್ನಡತೆ ಆಧಾರದಲ್ಲಿ ರಿಲೀಸ್ ಹೇಗೆ? ಏನೆಲ್ಲಾ ನಿಯಮಗಳಿವೆ?

ನ್ಯೂಸ್‌ ಆ್ಯರೋ : ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷಯನ್ನು ಅನುಭವಿಸುತ್ತಿದ್ದ 61 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರ ಒಪ್ಪಿಗೆಯಂತೆ ಬಿಡುಗಡೆ ಮಾಡಲಾಗಿದೆ.

ಗೃಹ ಇಲಾಖೆಯು ಸನ್ನಡತೆ ಆಧಾರದ ಮೇಲೆ 64 ಕೈದಿಗಳ ರಿಲೀಸ್​ಗೆ ಪಟ್ಟಿ ತಯಾರಿಸಿತ್ತು. ಬಳಿಕ ಈ ಪಟ್ಟಿಯನ್ನು ರಾಜ್ಯಪಾಲರಿಗೆ ನೀಡಿತ್ತು. ಈ ಪೈಕಿ ಮೊದಲು 57 ಕೈದಿಗಳ ರಿಲೀಸ್​ಗೆ ರಾಜ್ಯಪಾಲರ ಒಪ್ಪಿಗೆ ಸೂಚಿಸಿದ್ದರು. 7 ಕೈದಿಗಳ ಹೆಸರನ್ನು ವಾಪಸ್ ಕಳುಹಿಸಿದ್ದರು.

ಮರುಪರಿಶೀಲನೆ ಮಾಡಿ 7 ಕೈದಿಗಳಲ್ಲಿ ನಾಲ್ವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. 3 ಕೈದಿಗಳ ವಿರುದ್ಧ ಗಂಭೀರವಾದ ಕೇಸ್ ದಾಖಲಾಗಿದ್ದರಿಂದ ಬಿಡುಗಡೆಗೆ ನಿರಾಕರಿಸಲಾಗಿದೆ.

ಸನ್ನಡತೆ ಆಧಾರ ಎಂದರೇನು? ಸಾಮಾನ್ಯವಾಗಿ ಸನ್ನಡತೆ ಎಂದರೆ ಇತರರಿಗೆ ಉಪಕಾರಿಯಾಗಿ, ತಲೆ ಬಾಗಿ ನಡೆದುಕೊಳ್ಳುವುದು. ನೀತಿ-ನಿಯಮಗಳನ್ನು ಪಾಲಿಸುವುದು. ಇನ್ನೂ ಜೈಲು ಶಿಕ್ಷೆ ಅನುಭವಿಸುತ್ತಿರುವವರು ಕೂಡ ಶಿಕ್ಷಾವಧಿಯಲ್ಲಿ ಬದಲಾಗಿ ಜೈಲಿನಲ್ಲಿ ಈ ಬಗೆಯ ಸನ್ನಡತೆಯನ್ನು ತೋರಿದರೆ ಅವರಿಗೆ ಅವಧಿಪೂರ್ವ ಬಿಡುಗಡೆಯನ್ನು ದಯಪಾಲಿಸುವ ರಿವಾಜು ನಮ್ಮ ಕಾನೂನಿನಲ್ಲಿದೆ.

ಇನ್ನೂ ಶಿಕ್ಷಾವಧಿಯಲ್ಲೂ ಯಾವುದೇ ಬಗೆಯ ಸುಧಾರಣೆಯನ್ನು ತೋರದಿದ್ದರೆ ಅವಧಿಪೂರ್ವ ಬಿಡುಗಡೆಗೆ ಅರ್ಹರಾಗುವುದೇ ಇಲ್ಲ. ಅದರಲ್ಲೂ ಅತ್ಯಾಚಾರ, ಕೊಲೆ, ದೇಶದ್ರೋಹ ಇತ್ಯಾದಿ ಅಪರಾಧಗಳನ್ನು ಎಸಗಿರುವ ಅಪರಾಧಿಗಳನ್ನು ಸನ್ನಡತೆಯಾಧಾರಿತ ಬಿಡುಗಡೆಗೆ ಪರಿಗಣಿಸಲೇ ಬಾರದೆಂದು ಕೇಂದ್ರ ಸರಕಾರ ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ರೂಪಿಸಲಾದ ನಿಯಮಾವಳಿಗಳು ಸ್ಪಷ್ಟಪಡಿಸಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *