Chakravarthy Soolibele : ಸಾಮಾಜಿಕ ಜಾಲತಾಣದಲ್ಲಿ ಸ್ತ್ರೀನಿಂದನೆ, ಅಸಭ್ಯ ಕಾಮೆಂಟ್ ಆರೋಪ – ವಾಗ್ಮಿ ಸೂಲಿಬೆಲೆ ವಿರುದ್ಧ ದಾಖಲಾಯ್ತು ಪ್ರಕರಣ..!!

Chakravarthy Soolibele : ಸಾಮಾಜಿಕ ಜಾಲತಾಣದಲ್ಲಿ ಸ್ತ್ರೀನಿಂದನೆ, ಅಸಭ್ಯ ಕಾಮೆಂಟ್ ಆರೋಪ – ವಾಗ್ಮಿ ಸೂಲಿಬೆಲೆ ವಿರುದ್ಧ ದಾಖಲಾಯ್ತು ಪ್ರಕರಣ..!!

ನ್ಯೂಸ್ ಆ್ಯರೋ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಹಿಳೆಯೊಬ್ಬರಿಗೆ ಅಸಭ್ಯ ಪದಬಳಕೆ ಮಾಡಿದ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

ಸಾಮಾಜಿಕ ಮಾಧ್ಯಮವಾದ ಫೇಸ್ ಬುಕ್ ನಲ್ಲಿ ರಾಜ್ಯ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಸಂಚಾಲಕರದ ಸೌಗಂಧಿಕಾ ರಘುನಾಥ್ ಎಂಬುವವರಿಗೆ ಅಸಭ್ಯ ಪದ ಬಳಕೆ ಮಾಡಿ ಮೆಸೇಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸೌಗಂಧಿಕ ರಘುನಾಥ್ ದೂರು ದಾಖಲಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಮಹಿಳಾ ಮುಖಂಡರು ಮಾತನಾಡಿ, ಸೌಗಂಧಿಕ ಅವರಿಗೆ ನ್ಯಾಯ ಕೊಡಿಸುವುದು ನಮ್ಮ ಆದ್ಯ ಕರ್ತವ್ಯ. ಇದು ಆಕೆ ಒಬ್ಬರಿಗೆ ಆದ ಅವಮಾನವಲ್ಲ, ಎಲ್ಲಾ ಮಹಿಳೆಯರಿಗೂ ಆದ ಅವಮಾನ ಎಂದು ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಎನ್ನುವ ಸುಳ್ಳು ಭಾಷಣಕಾರ, ಸೌಗಂಧಿಕಾ ರಘುನಾಥ್‌ ಅವರ ಬಗ್ಗೆ ಅವಾಚ್ಯವಾಗಿ ಫೇಸ್ಬುಕ್ ಅಲ್ಲಿ ಕಾಮೆಂಟ್ ಮಾಡಿದ್ದಲ್ಲದೆ, ಹಾಕಿದ ಕಾಮೆಂಟ್ ಡಿಲೀಟ್ ಮಾಡಿ, ಫೇಕ್ ಅಕೌಂಟ್ ಬಳಸಿ ಎಡಿಟ್ ಮಾಡಿಸಿ ತೇಜೋವಧೆ ಮಾಡಲು ಪ್ರಯತ್ನಿಸಿದ್ದಾರೆ.

ಚಂದ್ರಯಾನ-3 ಯಶಸ್ವಿಯಾಗಲು ದೇವರಿಗೆ ಕೈ ಮುಗಿದು ಫೋಟೋ ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಮಾಡಿದ ಪೋಸ್ಟಿಗೆ ವಿಜ್ಞಾನಿಗಳ ಶ್ರಮಕ್ಕೆ ಯಶಸ್ಸು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ಆದರೆ ಅದನ್ನು ತೋರಿಕೆಗಾಗಿ ಆಗಲಿ ಅಥವಾ ಫೋಟೋಗಾಗಿಯಾಗಲಿ ದೇವರ ಮುಂದೆ ನಿಲ್ಲಬೇಡಿ ಎಂದು ಸೌಗಂಧಿಕಾ ರಘುನಾಥ್ ಪ್ರತಿಕ್ರಿಯಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ನಿನಗೆ ಎಲ್ಲಿ ಯಾಕೆ ಉರಿ ಬಂತು ಎಂಬ ಮಾತುಗಳನ್ನಾಡಿದ್ದು, ಇದು ನಿಂದನಾರ್ಹ ಹೇಳಿಕೆ ಎಂದು ದೂರು ನೀಡಲಾಗಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *