ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಢ – ಧಗ ಧಗ ಹೊತ್ತಿ ಉರಿದ 3 ಅಂತಸ್ತಿನ ಕಟ್ಟಡ, 1 ಕೋಟಿ ಸುಡುಮದ್ದು ಭಸ್ಮ

ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಢ – ಧಗ ಧಗ ಹೊತ್ತಿ ಉರಿದ 3 ಅಂತಸ್ತಿನ ಕಟ್ಟಡ, 1 ಕೋಟಿ ಸುಡುಮದ್ದು ಭಸ್ಮ

ನ್ಯೂಸ್ ಆ್ಯರೋ‌ : ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಬಳಿಯ ಬೃಹತ್ ಪಟಾಕಿ ಗೋದಾಮಿಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಕೆಲಸ ಮಾಡುತ್ತಿದ್ದ 6 ಮಂದಿ ಪಾರಾಗಿದ್ದಾರೆ.

1 ಕೋಟಿ ರೂ. ಮೌಲ್ಯದ ಸುಡುಮದ್ದು

ಘಟನೆಯಲ್ಲಿ ಸುಮಾರು 1 ಕೋಟಿ ರೂ. ಬೆಲೆಯ ಸುಡುಮದ್ದು ಭಸ್ಮವಾಗಿದೆ. ಸಿ.ವಿ.ವೀರೇಶ್ ಎಂಬರಿಗೆ ಸೇರಿದ ಭೂಮಿಕಾ ಟ್ರೇಡರ್ಸ್ ಗೋದಾಮಿನಲ್ಲಿ ವೆಲ್ಡಿಂಗ್ ಮಾಡುವಾಗ ಈ ಅವಘಢ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ಶಿವಕಾಶಿಯಿಂದ ತಂದಿದ್ದ ಸುಡುಮದ್ದನ್ನು ಈ ಮೂರು ಅಂತಸ್ತಿನ ಗೋಡೌನ್ ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಆಳೆತ್ತರದ ಹೊಗೆ ರಾಶಿ ಕಂಡು ಬಂದು ಜನರಲ್ಲಿ ಆತಂಕ ಮೂಡಿತ್ತು.

ಬೆಂಕಿ ನಂದಿಸುವಾಗಲೂ ಸುಡುಮದ್ದು ಸಿಡಿದಿದ್ದು, ಜೀವ ಉಳಿಸಿಕೊಳ್ಳಲು ಅಗ್ನಿಶಾಮಕ ದಳದ ಸಿಬ್ಬಂದಿ ದೂರ ತೆರಳಿದ್ದರು. ಸುರಕ್ಷತೆ ದೃಷ್ಟಿಯಿಂದ ಹಾನಗಲ್-ಹಾವೇರಿ ರಾಷ್ಟ್ರೀಯ ಹೆದ್ದಾರಿಯನ್ನು ಕೆಲವು ಹೊತ್ತು ಬಂದ್ ಮಾಡಲಾಗಿತ್ತು

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *