ಹಸುವನ್ನೇಕೆ ಕಡಿಯಬಾರದು ಎಂದು ಪ್ರಶ್ನಿಸಿದ ಪಶು ಸಂಗೋಪನ ಸಚಿವ ವೆಂಕಟೇಶ್ – ಗೋಹತ್ಯೆ ಕಾಯ್ದೆ ರದ್ದು ಸಾಧ್ಯತೆ

ಹಸುವನ್ನೇಕೆ ಕಡಿಯಬಾರದು ಎಂದು ಪ್ರಶ್ನಿಸಿದ ಪಶು ಸಂಗೋಪನ ಸಚಿವ ವೆಂಕಟೇಶ್ – ಗೋಹತ್ಯೆ ಕಾಯ್ದೆ ರದ್ದು ಸಾಧ್ಯತೆ

ನ್ಯೂಸ್ ಆ್ಯರೋ‌ : ಹೊಸದಾಗಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಕಾನೂನುಗಳ ಮರು ಪರಿಶೀಲನೆಗೆ ಮುಂದಾಗಿದೆ. ಈ ಹಿಂದೆ ಕಾಮಗಾರಿಗಳ ಟೆಂಡರ್ ರದ್ದು ಮಾಡಿದ್ದ ಸರಕಾರ ಇದೀಗ ಗೋವಧೆ ನಿಷೇಧ ಕಾಯ್ದೆ ಹಿಂಪಡೆಯುವ ಸಾಧ್ಯತೆ ಬಗ್ಗೆ ಪರಿಶೀಲಿಸುತ್ತಿದೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಪಶು ಸಂಗೋಪನ ಸಚಿವ ಕೆ.ವೆಂಕಟೇಶ್, ”ಹಸುವನ್ನೇಕೆ ಕಡಿಯಬಾರದು?” ಎಂದು ಪ್ರಶ್ನಿಸಿದ್ದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

”ಹಿಂದಿನ ಬಿಜೆಪಿ ಸರಕಾರ ಕೋಣ ಮತ್ತು ಎಮ್ಮೆಗಳನ್ನು ಕಡಿಯಲು ಅವಕಾಶ ನೀಡಿದೆ. ಆದರೆ ಹಸುಗಳನ್ನು ಕಡಿಯಬಾರದು ಎಂದಿದೆ. ಈ ಬಗ್ಗೆ ನಾವು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಎಮ್ಮೆ, ಕೋಣ ಕಡಿಯುವುದಾದರೆ ಹಸು ಯಾಕೆ ಕಡಿಯಬಾರದು?” ಎಂದು ವೆಂಕಟೇಶ್ ಕೇಳಿದ್ದಾರೆ.

”ನಮ್ಮ ಮನೆಯದ್ದೇ ಉದಾಹರಣೆ ಕೊಡ್ತೀನಿ. ನಾವು ಮೂರ್ನಾಲ್ಕು ಹಸು ಸಾಕಿದ್ವಿ. ಅದರಲ್ಲಿ ಒಂದು ತೀರಿ ಹೋಯ್ತು. ಅದನ್ನು ಏನು ಮಾಡುವುದೆಂದು ವೈದ್ಯರಲ್ಲಿ ಕೇಳಿದಾಗ ಹೂಳಲು ಹೇಳಿದರು. 25 ಜನ ಬಂದರೂ ಅದನ್ನು ಎತ್ತಲಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಹೂಳಬೇಕಾಯಿತು” ಎಂದು ಸಚಿವರು ಹೇಳಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *