ಅನ್ನಭಾಗ್ಯ ಯೋಜನೆಯ ಅಕ್ಟೋಬರ್ ತಿಂಗಳ ಹಣ ನಿಮ್ಮ ಖಾತೆಗೆ ಜಮೆ ಆಗಿದೆಯಾ? – ಸಿಂಪಲ್ ಆಗಿ ಹೀಗೆ ಚೆಕ್ ಮಾಡಿ…

ಅನ್ನಭಾಗ್ಯ ಯೋಜನೆಯ ಅಕ್ಟೋಬರ್ ತಿಂಗಳ ಹಣ ನಿಮ್ಮ ಖಾತೆಗೆ ಜಮೆ ಆಗಿದೆಯಾ? – ಸಿಂಪಲ್ ಆಗಿ ಹೀಗೆ ಚೆಕ್ ಮಾಡಿ…

ನ್ಯೂಸ್ ಆ್ಯರೋ : ರಾಜ್ಯದ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿತ್ತು. ಆದರೆ ಅಕ್ಕಿ ಕೊರತೆಯಿಂದಾಗಿ 5ಕೆಜಿ ಅಕ್ಕಿ ವಿತರಿಸಿ, ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ ರೂ.34 ದರದಲ್ಲಿ ನಗದನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ.

ಇದರ ಪ್ರಯೋಜನವನ್ನು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ ಹೊಂದಿರುವವರು ಪಡೆಯಬಹುದು. ಬಿಪಿಎಲ್ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಿದವರ ಬ್ಯಾಂಕ್ ಖಾತೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ನಿಮ್ಮ ಖಾತೆಯಲ್ಲಿ ಹಣ ಬಂದಿದೆಯಾ ಎಂಬುದನ್ನು ನೋಡಲು ಇಲ್ಲಿದೆ ಮಾಹಿತಿ.

1: ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಲಾಗಿನ್ ಆಗಿ
2: ಇ- ಸರ್ವಿಸ್ ಪೋರ್ಟಲ್‌ನಲ್ಲಿ ಡಿಬಿಟಿ ಎಂದು ಕಾಣಲಿದೆ, ಅದರ ಮೇಲೆ ಕ್ಲಿಕ್ ಮಾಡಿ
3: ಸ್ಟೇಟಸ್ ಆಫ್ ಡಿಬಿಟಿ ಅನ್ನು ಆಯ್ಕೆ ಮಾಡಿ

4: ನಂತರದ ಪುಟದಲ್ಲಿ ರೇಷನ್‌ ಕಾರ್ಡ್‌ ಸಂಖ್ಯೆ (ಆರ್‌ಸಿ ನಂಬರ್) ಭರ್ತಿ ಮಾಡಿ.
5: ಮುಂದುವರೆಯಿರಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ
6: ಮುಂದಿನ ಪುಟದಲ್ಲಿ ನಿಮ್ಮ ಖಾತೆಗೆ ಹಣ ಜಮೆ ಆಗಲಿದೆಯೇ, ಕ್ರೆಡಿಟ್ ಆಗಿಲ್ಲವೇ ಎಂಬ ಮಾಹಿತಿ ಲಭ್ಯವಾಗಲಿದೆ.

ಅನ್ನ ಭಾಗ್ಯ ಯೋಜನೆ ಜಾರಿಯಾದ ಮೊದಲ ಎರಡು ತಿಂಗಳಲ್ಲಿ ಫಲಾನುಭವಿಗಳಿಗೆ ಸುಮಾರು ₹ 294 ಕೋಟಿ ರೂಪಾಯಿ ನಗದು ವರ್ಗಾವಣೆಯಾಗಿಲ್ಲ ಎಂದು ಡಿಎಚ್‌ ವರದಿ ಮಾಡಿದೆ. ಈಗ ದಾಖಲೆ ಪರಿಶೀಲನೆ ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಂತಹ ಸಮಸ್ಯೆಗಳನ್ನು ಉಲ್ಲೇಖಿಸಿ ಸರ್ಕಾರವು ಜುಲೈನಲ್ಲಿ ಸುಮಾರು 30.90 ಲಕ್ಷ ಕಾರ್ಡ್‌ಗಳ (1.08 ಕೋಟಿ ಫಲಾನುಭವಿಗಳು) ಮತ್ತು ಆಗಸ್ಟ್‌ನಲ್ಲಿ 24.44 ಲಕ್ಷ ಕಾರ್ಡ್‌ಗಳ (73 ಲಕ್ಷ ಫಲಾನುಭವಿಗಳು) ಖಾತೆಗಳಿಗೆ ಜಮಾ ಮಾಡಿಲ್ಲ.

ಹಣ ಪಡೆಯಲು ಅಂಚೆ ಕಚೇರಿಯಲ್ಲೂ ಖಾತೆ ತೆರೆಯಬಹುದು. ‘ಅನ್ನಭಾಗ್ಯ’ ಫಲಾನುಭವಿಗಳು ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಲು ಅವಕಾಶವಿದೆ. ಅಂಚೆ ವಿತರಕನಿಗೆ ಅಗತ್ಯ ದಾಖಲೆ ಒದಗಿಸಿ ಮನೆ ಬಾಗಿಲಿನಲ್ಲೇ ಸೇವೆ ಪಡೆಯಬಹುದಾಗಿದೆ. ಅದಲ್ಲದೆ ಈ ಸೇವೆಯನ್ನು ಪಡೆದುಕೊಳ್ಳಲು ಅಂಚೆ ಇಲಾಖೆ ‘ಡಿ ಕ್ಯೂಬ್ ‘ ಆ್ಯಪ್ ಪರಿಚಯಿಸಿದೆ

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *