ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬಿಗ್ ಶಾಕ್ – ಜನನ, ಮರಣ ವಿಳಂಬ ನೋಂದಣಿ ಶುಲ್ಕದಲ್ಲಿ ಭಾರೀ‌ ಹೆಚ್ಚಳ

ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬಿಗ್ ಶಾಕ್ – ಜನನ, ಮರಣ ವಿಳಂಬ ನೋಂದಣಿ ಶುಲ್ಕದಲ್ಲಿ ಭಾರೀ‌ ಹೆಚ್ಚಳ

ನ್ಯೂಸ್ ಆ್ಯರೋ‌ : ಚುನಾವಣೆಗೂ ಮುನ್ನ ಹಲವು ಭಾಗ್ಯಗಳನ್ನು ಘೋಷಿಸಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ಸರ್ಕಾರ ಸದ್ಯ ಎಲ್ಲಾ ತೆರಿಗೆಗಳನ್ನು ಏಕಾಏಕಿ ಏರಿಸುತ್ತಿದೆ ಎಂಬ ಆರೋಪಗಳ‌ ಮಧ್ಯೆ ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದೆ. ಜನನ, ಮರಣ ನೋಂದಣಿ ವಿಳಂಬ ಶುಲ್ಕದಲ್ಲಿ ಭಾರೀ ಏರಿಕೆ ಮಾಡಲು ನಿರ್ಧರಿಸಿದೆ.

ಸದ್ಯ ರಾಜ್ಯ ಸರ್ಕಾರವು ಜನನ, ಮರಣ ನೋಂದಣಿ ನಿಯಮಗಳು-1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನೂ ಪರಿಷ್ಕರಿಸಿದೆ. ಅದರ ಪ್ರಕಾರ ಎರಡು, ಐದು ಹಾಗೂ ಹತ್ತು ರೂಪಾಯಿ ಇದ್ದ ಶುಲ್ಕವನ್ನು ಸಿಕ್ಕಾಪಟ್ಟೆ ಏರಿಸಿದೆ‌‌.

ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 ದಿನಗಳ ಒಳಗಾಗಿ ನೋಂದಾಯಿಸುವ ವಿಳಂಬ ನೋಂದಣಿಗೆ ಹಾಲಿ ಇರುವ ವಿಳಂಬ ಶುಲ್ಕವನ್ನು 2 ರೂ. ಬದಲು 1000 ರೂ.ಗೆ 30 ದಿನಗಳ ನಂತರ 5 ರೂ. ಬದಲು 200 ರೂ. 1 ವರ್ಷ ಬಳಿಕ ನೋಂದಣಿಗೆ 10 ರೂ. ಬದಲು 500 ರೂ. ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಇನ್ಮುಂದೆ ಜನನ, ಮರಣ ನೋಂದಣಿಗೆ ಕೋರ್ಟ್ ಅಲೆಯಬೇಕಿಲ್ಲ. ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈವರೆಗೆ ಜನನ, ಮರಣ ನೋಂದಣಿ ಕಾಯಿದೆ ಸೆಕ್ಷನ್ 12(3) ಅಡಿ ವಿಳಂಬ ತಿದ್ದುಪಡಿ ಸೇರಿದಂತೆ ಯಾವುದೇ ತಾಗದೆಗಳಿದ್ದರೂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಟ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರ ಇರಲಿಲ್ಲ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *