ಜೋರಾಗಿ ಮಳೆ ಬಂದು ನಿಂತ ಮೇಲೆ ಗಿಡಗಳಿಗೆ ನೀರು ಹಾಕಿದ ಸಿಬ್ಬಂದಿ ! – ಬಿಬಿಎಂಪಿ ಮೂರ್ಖತನಕ್ಕೆ ಬೆಂಡೆತ್ತಿದ ನೆಟ್ಟಿಗರು..!!

ಜೋರಾಗಿ ಮಳೆ ಬಂದು ನಿಂತ ಮೇಲೆ ಗಿಡಗಳಿಗೆ ನೀರು ಹಾಕಿದ ಸಿಬ್ಬಂದಿ ! – ಬಿಬಿಎಂಪಿ ಮೂರ್ಖತನಕ್ಕೆ ಬೆಂಡೆತ್ತಿದ ನೆಟ್ಟಿಗರು..!!

ನ್ಯೂಸ್ ಆ್ಯರೋ : ಜೋರಾಗಿ ಮಳೆ ಬಂದು ದಿನ ಕಳೆದಿಲ್ಲ, ಅಷ್ಟರಲ್ಲೇ ಯಾರಾದರೂ ಗಿಡಗಳಿಗೆ ನೀರು ಹಾಕಿದರೆ ಏನಂತ ಕರಿತಾರೆ? ಕರೆಯೋದೇನು ಶತಮೂರ್ಖರು ಅಂತ ಬೆಂಡೆತ್ತಿ ಬಿಡ್ತಾರೆ. ಸದ್ಯ, ಬಿಬಿಎಂಪಿ ಕೂಡ ಇಂತಹದ್ದೊಂದು ಮೂರ್ಖತನದ ಕೆಲಸ ಮಾಡಿ ನೆಟ್ಟಿಗರಿಂದ ಟೀಕೆಗೆ ಒಳಗಾಗಿದೆ.

ಏನಿದು ಘಟನೆ?

ಜೋರಾಗಿ ಮಳೆ ಬಂದು ನಿಂತ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ಸಿಬ್ಬಂದಿ ರಸ್ತೆ ಬದಿಯ ಗಿಡಗಳಿಗೆ ನೀರು ಹಾಕಿದ್ದು, ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿರುವ ಕಾರಣ ಎಲ್ಲೆಡೆ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೂಡ ಇಂದು ಮುಂಜಾನೆಯಿಂದಲೇ ಭರ್ಜರಿ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಬೆಂಗಳೂರಿಗರು ಪರದಾಡುವಂತಾಗಿದೆ. ಮಳೆ ನಿಂತ ಮೇಲೂ ಮೋಡ ಕವಿದ ವಾತಾವರಣ ನಗರದ ತುಂಬ ಆವರಿಸಿತ್ತು. ಬಿಸಿಲಿನ ಒಂದೇ ಒಂದು ಕಿರಣವು ಕೂಡ ಬೆಂಗಳೂರು ಪ್ರವೇಶಿಸಿರಲಿಲ್ಲ. ಇಂತಹ ವಾತಾವರಣವಿರುವಾಗ ಬಿಬಿಎಂಪಿ ದೊಡ್ಡ ಎಡವಟ್ಟು ಮಾಡಿಕೊಂಡಿದೆ. ಮಳೆ ನಿಂತ ಮೇಲೆ ಬಿಬಿಎಂಪಿ ಸಿಬ್ಬಂದಿಗಳು ಟ್ಯಾಂಕರ್ ಮೂಲಕ ನಗರದ ಪ್ರಮುಖ ರಸ್ತೆಗಳ ಬದಿಯಲ್ಲಿರುವ ಗಿಡಗಳಿಗೆ ನೀರು ಹಾಯಿಸಿದ್ದಾರೆ.

ಮಳೆ ನಿಂತ ಕೆಲವು ಗಂಟೆಗಳಲ್ಲೇ ಮೂರ್ಖರಂತೆ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರು ಹಾಕುವ ದೃಶ್ಯವನ್ನು ಕೆಲವರು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೆಂಡಾಮಂಡಲವಾದ ನೆಟ್ಟಿಗರು ‘ಇಷ್ಟೊಂದು ಮಳೆ ಬಂದು ನಿಂತ ಮೇಲೆ ಗಿಡಗಳಿಗೆ ನೀರು ಹಾಕಬೇಕಾ? ಮಳೆ ಬಂದ ಮೇಲೂ ಟ್ಯಾಂಕರ್ ಮೂಲಕ ನೀರು ತಂದು ಹಾಕಬೇಕಾ? ಎಂದೆಲ್ಲ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಆದರೆ ಇದ್ಯಾವುದಕ್ಕೂ ಬಿಬಿಎಂಪಿ ಸ್ಪಷ್ಟನೆ ನೀಡಿಲ್ಲ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *