ಡೀಲ್ ಚೈತ್ರಾ ಕುಂದಾಪುರ ಪ್ರಕರಣ – ತಲೆಮರೆಸಿಕೊಂಡಿದ್ದ ಎ3 ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನ

ಡೀಲ್ ಚೈತ್ರಾ ಕುಂದಾಪುರ ಪ್ರಕರಣ – ತಲೆಮರೆಸಿಕೊಂಡಿದ್ದ ಎ3 ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನ

ನ್ಯೂಸ್ ಆ್ಯರೋ : ಉಡುಪಿಯ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಎ3 ಆರೋಪಿ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓರಿಸ್ಸಾದಲ್ಲಿ ಬಂಧಿಸಿದ್ದಾರೆ.

ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣದ 3ನೇ ಆರೋಪಿ ಹಾಲಾಶ್ರೀ ಸ್ವಾಮೀಜಿಯನ್ನು ಒಡಿಶಾದ ಕಟಕ್​ನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಬಿ ಪೋಲಿಸರ ಕಣ್ತಪ್ಪಿಸಿ ಹಾಲಶ್ರೀ ಸ್ವಾಮೀಜಿ ದಿನಕ್ಕೊಂದು ಸ್ಥಳವನ್ನು ಬದಲಾಯಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಮೊದಲು ಸ್ವಾಮೀಜಿಯ ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿ ಮಹತ್ವದ ಅಂಶ ಕಲೆಹಾಕಿದ್ದರು.

ಮೊದಲಿಗೆ ಸಿಸಿಬಿ ಪೊಲೀಸರಿಂದ ಸ್ವಾಮೀಜಿ ಆತ್ಮೀಯ ಸಂಪರ್ಕದಲ್ಲಿದ್ದವರ ವಿಚಾರಣೆ ಮಾಡಿದ್ದರು. ಮಠದ ಕೆಲ ಆತ್ಮೀಯರು ಹಾಗೂ ಚಾಲಕ ಸೇರಿ ಕೊನೆ ಕ್ಷಣದ ಕರೆಗಳ ಆಧರಿಸಿ ವಿಚಾರಣೆ ಮಾಡಲು ಸಿಸಿಬಿ ಅಧಿಕಾರಿಗಳು ಮುಂದಾಗಿದ್ದು ಕೊನೆಗೂ ಸ್ವಾಮೀಜಿಯನ್ನು ಬಂಧಿಸಿದ್ದಾರೆ.

ಇಂದು ಸಂಜೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆಯಿದೆ. ಅಭಿನವ ಹಾಲಶ್ರೀ’ ಸ್ವಾಮೀಜಿ ಮೈಸೂರಿನಲ್ಲಿ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರಚಲು ಕಾರಿನ ನಂಬರ್ ಪ್ಲೇಟ್ ತೆಗೆದು ಪ್ರಯಾಣಿಸಿದ್ದರು. ಬಳಿಕ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದರು. ಇಂದೇ ಈ ಪ್ರಕರಣದಲ್ಲಿ ಹಾಲಶ್ರೀ ಸ್ವಾಮಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ದಿನಾಂಕ ನಿಗದಿಯಾಗಿತ್ತು.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *