Chaithra Kundapur Fraud Case : ಹಾಲಶ್ರೀ ಸ್ವಾಮೀಜಿ ಮಠಕ್ಕೆ 56 ಲಕ್ಷ ಹೊತ್ತು ತಂದ ವಕೀಲ – ವಂಚನೆ ಪ್ರಕರಣದಲ್ಲಿ ಸಿಸಿಬಿಗೆ ಸಿಕ್ತು ಬಲುದೊಡ್ಡ ಸಾಕ್ಷ್ಯ.‌.!

Chaithra Kundapur Fraud Case : ಹಾಲಶ್ರೀ ಸ್ವಾಮೀಜಿ ಮಠಕ್ಕೆ 56 ಲಕ್ಷ ಹೊತ್ತು ತಂದ ವಕೀಲ – ವಂಚನೆ ಪ್ರಕರಣದಲ್ಲಿ ಸಿಸಿಬಿಗೆ ಸಿಕ್ತು ಬಲುದೊಡ್ಡ ಸಾಕ್ಷ್ಯ.‌.!

ನ್ಯೂಸ್ ಆ್ಯರೋ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿರುವ ಹಾಲಸ್ವಾಮಿ ಮಠಕ್ಕೆ ವ್ಯಕ್ತಿಯೊಬ್ಬ 56 ಲಕ್ಷ ರೂ. ಹಣ ನೀಡಿ ತೆರಳಿದ ಘಟನೆ ನಡೆದಿದ್ದು, ವಂಚನೆ ಪ್ರಕರಣದಲ್ಲಿ ಸ್ವಾಮೀಜಿ ಶಾಮೀಲು ವಿಚಾರಕ್ಕೆ ಸಂಬಂಧಿಸಿದಂತೆ ಬಹುದೊಡ್ಡ ಸಾಕ್ಷಿ ದೊರಕಿದಂತಾಗಿದೆ.

ಮೈಸೂರು ಮೂಲದ ಪ್ರಣವ್‌ ಪ್ರಸಾದ್‌ ವೃತ್ತಿಯಲ್ಲಿ ವಕೀಲ ಹಾಗೂ ಉದ್ಯಮಿಯಾಗಿದ್ದು, ಹಣ ನೀಡಿರುವುದರ ಬಗ್ಗೆ ವಿಡಿಯೋ ಮಾಡಿ ಹೇಳಿಕೆ ನೀಡಿರುವ ಅವರು, 4 ದಿನಗಳ ಹಿಂದೆ ಅಭಿನವ ಹಾಲಶ್ರೀ ಕಾರು ಚಾಲಕ ರಾಜು ಮೈಸೂರಿನಲ್ಲಿ ನನಗೆ 60 ಲಕ್ಷ ರೂ. ಹಣ ನೀಡಿದ್ದರು. ಈ ಪೈಕಿ 56 ಲಕ್ಷ ರೂ. ನನಗೆ ತಲುಪಿಸಿದ್ದರು. ಉಳಿದ 4 ಲಕ್ಷ ರೂ. ವಕೀಲರ ಶುಲ್ಕಕ್ಕಾಗಿ ಕಾರು ಚಾಲಕ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರಿನ ನನ್ನ ಕಚೇರಿಗೆ ಶ್ರೀಗಳ ಕಾರು ಚಾಲಕ ಹಣ ಕೊಟ್ಟು ಹೋಗಿದ್ದರು. ಹಣ ವಾಪಸ್ ಪಡೆಯಲು ಯಾರೂ ಬಾರದಿದ್ದರಿಂದ ಮಠಕ್ಕೆ ನೀಡಿದ್ದೇನೆ. ನಾನು ಖುದ್ದು ಹಾಲಸ್ವಾಮಿ ಮಠಕ್ಕೆ ಆಗಮಿಸಿ 56 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಡಿಸಿಪಿ ಅಬ್ದುಲ್ ಅಹದ್‌ಗೆ ಪ್ರಣವ್ ಪ್ರಸಾದ್​ ಪತ್ರ ಬರೆದಿದ್ದು, ಕಳೆದ 8 ತಿಂಗಳಿಂದ ಶ್ರೀಗಳಿಗೆ ಪ್ರಣವ್ ಪ್ರಸಾದ್​ ಪರಿಚಯವಿದ್ದು, ಆಗಾಗ ಮನೆಗೆ ಆಶೀರ್ವಚನ ನೀಡಲು ಹೋಗುತ್ತಿದ್ದರು. ಆದರೆ ನನಗೂ, ವಂಚನೆ ಕೇಸ್‌ಗೂ ಯಾವುದೇ ಸಂಬಂಧವಿಲ್ಲ. ತನಿಖೆಗೆ ಅನಕೂಲವಾಗುತ್ತದೆ ಎಂದು ಮಾಹಿತಿ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಣವ್‌ ಪತ್ನಿ ಮಾತನಾಡಿ, ಪತಿ ಪ್ರಣವ್ ಮನೆ ಬಿಟ್ಟು 3 ದಿನವಾಯಿತು. ಸ್ವಾಮೀಜಿಗೂ ನಮ್ಮ‌ ಕುಟುಂಬಕ್ಕೂ ಪರಿಚಯವಿತ್ತು. ನನ್ನ ಪತಿಯ ಸಹೋದರ ಮನೆಯಲ್ಲಿ ಸ್ವಾಮೀಜಿ ಉಳಿದು ಕೊಂಡಿದ್ದರು. 2 ವರ್ಷದಿಂದ ನಮಗೆ ಸ್ವಾಮೀಜಿ ಪರಿಚಯ. ನಮಗೆ ಹಣದ ವ್ಯವಹಾರ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಹಣ ಇರಲಿಲ್ಲ ಎಂದು ಹೇಳಿದ್ದು ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *