ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ – ಕೇಸ್ ಹಾಕಿದ್ದ ಗೋವಿಂದ ಪೂಜಾರಿ ಬಳಿ ದಾಖಲೆಗಳೇ ಇಲ್ವಾ? ಸಿಸಿಬಿ ನೋಟಿಸ್ ನೀಡಿದ್ಯಾಕೆ?
- ಕರ್ನಾಟಕ
- October 11, 2023
- No Comment
- 1349
ನ್ಯೂಸ್ ಆ್ಯರೋ : ಕೋಟ್ಯಾಂತರ ರೂಪಾಯಿ ಡೀಲ್ ರೂವಾರಿ ಚೈತ್ರಾ ಕುಂದಾಪುರ (Chaitra Kundapura) ಹಾಗೂ ಟೀಂ ನಿಂದ ವಂಚನೆ ಪ್ರಕರಣ ಸಂಬಂಧಿಸಿದಂತೆ ದೂರುದಾರ ಗೋವಿಂದ ಬಾಬು ಪೂಜಾರಿ ಸಿಸಿಬಿ ಪೊಲೀಸರ ತನಿಖೆಗೆ ಸ್ಪಂದಿಸದೇ ಇರುವುದು ಬೆಳಕಿಗೆ ಬಂದಿದ್ದು, ಹಲವು ಅನುಮಾನ ಮೂಡಿದೆ.
ಚೈತ್ರಾ ವಂಚಿಸಿದ್ದಳು ಎನ್ನಲಾದ ಐದು ಕೋಟಿ ಹಣದ ಮೂಲದ ಬಗ್ಗೆ ಗೋವಿಂದ ಬಾಬು ಪೂಜಾರಿ ದಾಖಲಾತಿ ಇನ್ನೂ ನೀಡದೇ ಇರುವುದರಿಂದ ಈ ಬಗ್ಗೆ ಸಿಸಿಬಿಯಿಂದ ನೋಟಿಸ್ (CCB Notice) ನೀಡಲಾಗಿದೆ.
ಈ ವಂಚನೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳು ಜೈಲು ಸೇರಿದ್ರೆ, ಇತ್ತ ದಾಖಲಾತಿ ನೀಡೋದಾಗಿ ಹೇಳಿದ್ದ ಉದ್ಯಮಿ ಸಿಸಿಬಿ ಕಡೆ ತಲೆ ಹಾಕುತ್ತಿಲ್ಲವಂತೆ. ಹಣ ನೀಡಿರುವ ಬಗ್ಗೆ 10 ಕ್ಕೂ ಹೆಚ್ಚು ವೀಡಿಯೊಗಳಿರೋದಾಗಿ ಹೇಳಿದ್ದ ಉದ್ಯಮಿ, ಇದೀಗ ಕೇವಲ ಐದು ವೀಡಿಯೋಗಳನ್ನಷ್ಟೆ ಸಿಸಿಬಿಗೆ ನೀಡಿದ್ದು, ಉಳಿದವುಗಳ ದಾಖಲೆ ಕೊಟ್ಟಿಲ್ಲ.
ಸದ್ಯ ಚೈತ್ರಾ ಕುಂದಾಪುರಗೆ ಐದು ಕೋಟಿ ಹಣವನ್ನು ಲೋನ್ ಪಡೆದು ಕೊಟ್ಟಿರೋದಾಗಿ ಹೇಳಿದ್ದ ಉದ್ಯಮಿ, ಈವರೆಗೂ ಹಣದ ಮೂಲದ ಡಾಕ್ಯುಮೆಂಟ್ಸ್ ನೀಡ್ತಿಲ್ಲ. ಲೋನ್ ಪಡೆದಿದ್ರೆ ಅದ್ರ ದಾಖಲಾತಿ ಸಲ್ಲಿಸಿ ಅಂತಾ ಸಿಸಿಬಿ ಪೊಲೀಸರು ಹೇಳಿದ್ರೂ ಉಪಯೋಗವಾಗಿಲ್ಲ.
ಇತ್ತ ದಾಖಲಾತಿ ಸಮೇತ ವಿಚಾರಣೆಗೆ ಬರುವಂತೆ ಎರಡು ಬಾರಿ ನೋಟಿಸ್ ನೀಡಿದರೂ ಉದ್ಯಮಿ ಗೋವಿಂದ ಬಾಬು ಪೂಜಾರಿ ಸಿಸಿಬಿ ಕಡೆ ತಲೆ ಹಾಕಿಲ್ಲ ಎನ್ನಲಾಗಿದ್ದು, ಪ್ರಕರಣ ದಾಖಲಿಸುವಾಗ ಇದ್ದ ಜೋಶ್ ಈಗ ಯಾಕೆ ಕಡಿಮೆ ಆಯಿತು ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.