ಚೈತ್ರಾ ಗ್ಯಾಂಗ್ ಐದು ಕೋಟಿ ವಂಚನೆ ಪ್ರಕರಣ – 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಏನೇನ್ ಉಲ್ಲೇಖವಿದೆ?

ಚೈತ್ರಾ ಗ್ಯಾಂಗ್ ಐದು ಕೋಟಿ ವಂಚನೆ ಪ್ರಕರಣ – 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಏನೇನ್ ಉಲ್ಲೇಖವಿದೆ?

ನ್ಯೂಸ್ ಆ್ಯರೋ : ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ.

ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 75 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 4.11 ಕೋಟಿ ನಗದು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಾಥಮಿಕ, ಸಾಂದರ್ಭಿಕ ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು.

ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಮೈಸೂರು ಮೂಲದ ವ್ಯಕ್ತಿಯು ನೀಡಿದ ಹೇಳಿಕೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಸಿಸಿಬಿ ತಂಡ ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು ಎಂಎಲ್‌ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿ, 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ‌ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಬೃಹತ್ ಮೊತ್ತದ ಹಣ ರಿಕವರಿ ಹಿನ್ನಲೆ ಚೈತ್ರಾ ಗ್ಯಾಂಗ್​ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಈವರೆಗೆ ಸಿಸಿಬಿ ಪೊಲೀಸರು ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಪಡೆದಿದ್ದಾರೆ. ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ‌ ಉಲ್ಲೇಖಿಸಲಾಗಿದೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜಾಮೀನು ಸಿಗದೇ ಕಂಗಾಲಾಗಿದ್ದಾರೆ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *