ತಂದೆಯಿಂದಲೇ ಮಗಳಿಗೆ ಪಿಎಸ್ಐ ಅಧಿಕಾರ ಹಸ್ತಾಂತರ – ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಮಂಡ್ಯ ಪೋಲಿಸ್ ಠಾಣೆ

ತಂದೆಯಿಂದಲೇ ಮಗಳಿಗೆ ಪಿಎಸ್ಐ ಅಧಿಕಾರ ಹಸ್ತಾಂತರ – ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಮಂಡ್ಯ ಪೋಲಿಸ್ ಠಾಣೆ

ನ್ಯೂಸ್ ಆ್ಯರೋ‌ : ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ.

ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಈ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಎನ್ನಿಸಿಕೊಂಡಿತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

ಮಿಲ್ಟ್ರಿ ಮ್ಯಾನ್

ವೆಂಕಟೇಶ್ ಅವರು ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೀನಾ, ಬಾಂಗ್ಲಾದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಜತೆಗೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇನ್ನು ಇವರನ್ನು ಮಿಲ್ಟ್ರಿ ಮ್ಯಾನ್ ಎಂತಲೂ ಕರೆಯಲಾಗುತ್ತದೆ.

ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್‌ಐ ಪರೀಕ್ಷೆ ಪಡೆದು ಮಿಲಿಟರಿ ಕೋಟಾದಡಿ 2010ರ ಬ್ಯಾಚ್‌ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ, ಮತ್ತೆ ಮಂಡ್ಯಕ್ಕೆ ಬಂದು ಸೆಂಟ್ರಲ್ ಠಾಣೆಗೆ ಒಂದೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಅದೃಷ್ಟವಂತೆ ವರ್ಷಾ

ಇನ್ನು 2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಕಲುಬುರಗಿಯಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಮೊದಲ ನಿಯೋಜನೆ ಕೂಡ ಮಂಡ್ಯದಲ್ಲೇ ಆಗಿದೆ. ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಸಿಕ್ಕಿದೆ. ಅಂತೆಯೇ ಠಾಣೆಯಲ್ಲಿ ಮಂಗಳವಾರ ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ. ಇವರು ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *