Udupi : MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ – ಬೃಹನ್ನಾಟಕ ಸೂತ್ರಧಾರಿ ಚೈತ್ರಾ ಕುಂದಾಪುರ, ಮೂವರು ಸಹಚರರ ಬಂಧನ

Udupi : MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ – ಬೃಹನ್ನಾಟಕ ಸೂತ್ರಧಾರಿ ಚೈತ್ರಾ ಕುಂದಾಪುರ, ಮೂವರು ಸಹಚರರ ಬಂಧನ

ನ್ಯೂಸ್ ಆ್ಯರೋ : ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ ಜಿಲ್ಲೆ, ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಇವರಿಗೆ ಚೈತ್ರಾ ಮತ್ತಾಕೆಯ ಸಹಚರರ ತಂಡ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿತ್ತು.

ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಗೋವಿಂದ ಬಾಬು ಪೂಜಾರಿ ಅವರ ಮುಗ್ಧತೆಯನ್ನು ಬಳಸಿಕೊಂಡು ಚೈತ್ರಾಳ ತಂಡ ಮಹಾವಂಚನೆ ನಡೆಸಿತ್ತು.

ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ನಾಲ್ಕೈದು ಜನರ ತಂಡದಿಂದ ಬೃಹನ್ನಾಟಕ ನಡೆಸಿದ್ದಳು. ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಳು. ಅಲ್ಲದೆ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್ ಬಳಿಕ ಹಂತ ಹಂತವಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಏಳು ಕೋಟಿ ರೂಪಾಯಿ ಸುಲಿಗೆ ಮಾಡಿತ್ತು.

ಚೈತ್ರಾ ಅಲ್ಲದೇ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನೂ ಕೂಡ ವಶಕ್ಕೆ ಪಡೆದ ಪೊಲೀಸರು ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿಸಿದ್ದ ಖದೀಮರು ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಎಸಗಿದ್ದರು. ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಮತ್ತು ಪ್ರಸಾದ್ ಈ ನಾಲ್ವರ ತಂಡ ಇದೀಗ ಪೋಲಿಸರ ಬಂಧನಕ್ಕೆ ಒಳಗಾಗಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *