ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ – ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಪ್ರಕರಣ ದಾಖಲು

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ – ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಆ್ಯರೋ : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯೊಬ್ಬಳು ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ದೂರು ನೀಡಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಅವರ ವಿರುದ್ಧ ಬೆಂಗಳೂರು ಮೂಲದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್​ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *