ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತು ನಿಮ್ಮ ಖಾತೆಗೆ ಜಮಾ ಆಗಿಲ್ವಾ? – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದು ಹೀಗೆ…
- ಕರ್ನಾಟಕ
- October 27, 2023
- No Comment
- 105
ನ್ಯೂಸ್ ಆ್ಯರೋ : ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಸದ್ಯ ಬಹುತೇಕ ಮಹಿಳೆಯರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಜಮೆ ಆಗಿದೆ. ಆದರೆ ಕೆಲವರಿಗೆ ಇನ್ನೂ ಹಣ ಬಂದಿಲ್ಲ. ಈ ಬಗ್ಗೆ ಯಾವುದೇ ಭಯ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ಅಗಸ್ಟ್ ತಿಂಗಳಿನಿಂದಲೇ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದಿದೆ. ಅಲ್ಲದೇ ಬಹುತೇಕರಿಗೆ ಸಪ್ಟೆಂಬರ್ ತಿಂಗಳಿನಲ್ಲಿ ಗೃಹಿಣಿಯರ ಬ್ಯಾಂಕ್ ಖಾತೆಗೆ ಹಣ ನೇರವಾಗಿ ವರ್ಗಾವಣೆ ಆಗಿದೆ.
ಇದೀಗ ಎರಡನೇ ಕಂತಿನ ಹಣವನ್ನು ಅಕ್ಟೋಬರ್ 17 ರಿಂದಲೇ ಗೃಹಿಣಿಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಆದರೆ ಕೆಲವರಿಗೆ ಇನ್ನೂ ಎರಡನೇ ಕಂತಿನ ಹಣ ವರ್ಗಾವಣೆ ಆಗಿಲ್ಲ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಲ್ಲ ಅನ್ನೋ ಗೊಂದಲ, ಚಿಂತೆ ಬೇಡ. ತಡವಾಗಿ ಆದ್ರೂ ಎಲ್ಲಾ ಫಲಾನುಭವಿಗಳ ಖಾತೆಗೆ ಹಣವು ನೇರವಾಗಿ ವರ್ಗಾವಣೆ ಆಗಲಿದೆ. ಆದರೆ ನಿಮ್ಮ ಖಾತೆಯಲ್ಲಿ ಏನಾದ್ರೂ ಸಮಸ್ಯೆ ಇದೆಯಾ ಅನ್ನೋ ಬಗ್ಗೆ ಒಮ್ಮೆ ಪರಿಶೀಲಿಸಿಕೊಳ್ಳಬೇಕು ಎಂದರು.
ಇನ್ನು ಮಹಿಳೆಯರು ತಮ್ಮ ಬ್ಯಾಂಕ್ ಖಾತೆ ಇರುವ ಬ್ಯಾಂಕ್ಗಳಿಗೆ ತೆರಳಿ ವಿಚಾರಿಸಿಕೊಳ್ಳುವುದು ಉತ್ತಮ. ಸದ್ಯ ಒಂದೊಂದೇ ಜಿಲ್ಲೆಗಳಿಗೆ ಹಣ ವರ್ಗಾವಣೆ ವರ್ಗಾವಣೆಯನ್ನು ಮಾಡುತ್ತಿದೆ. ಹಣವನ್ನು ವರ್ಗಾವಣೆ ಮಾಡುವ ಕುರಿತು ಆರ್ಬಿಐ ವ್ಯವಹಾರದ ಮಿತಿಯನ್ನು ಹೇರಿದೆ. ಹೀಗಾಗಿ ನಿತ್ಯವೂ ನಾಲ್ಕು ಲಕ್ಷ ಜನರಿಗೆ ಮಾತ್ರವೇ ವರ್ಗಾವಣೆ ಮಾಡಲು ಸಾಧ್ಯ ಎಂದು ವಿವರಿಸಿದರು.
ಮೊದಲ ಹಾಗೂ ಎರಡನೇ ಕಂತಿನ ಹಣವೂ ಸಿಗದೇ ಇರುವ ಮಹಿಳೆಯರಿಗೆ ಒಟ್ಟಿಗೆ ಎರಡೂ ತಿಂಗಳ ಹಣ ರೂ 4000 ಸಾವಿರ ಜಮೆ ಆಗುವ ಸಾಧ್ಯತೆಯಿದೆ. ಆದರೆ ಯಾವುದಕ್ಕೂ ಒಮ್ಮೆ ನಿಮ್ಮ ಬ್ಯಾಂಕ್ನ ಶಾಖೆಗೆ ಭೇಟಿ ನೀಡಿ ವಿಚಾರಿಸುವುದು ಉತ್ತಮ. ಎರಡೂ ತಿಂಗಳ ಹಣ ಬ್ಯಾಂಕ್ ಖಾತೆಗೆ ಜಮೆ ಆಗುವ ಕುರಿತು ಸಿಎಂ ಸಿದ್ದರಾಮಯ್ಯ ಅವರೇ ಈ ಹಿಂದೆ ತಿಳಿಸಿದ್ದರು.
ಒಂದೊಮ್ಮೆ ನಿಮ್ಮ ರೇಷನ್ ಕಾರ್ಡ್ನಲ್ಲಿ ತಾಂತ್ರಿಕದೋಷವಿದ್ದರೆ, ಅಂತಹ ಕಾರ್ಡುದಾರರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ದೊರೆಯುತ್ತದೆ. ಆದರೆ ಪಡಿತರ ಚೀಟಿಯಲ್ಲಿ ಮನೆಯ ಯಜಮಾನನ ಹೆಸರು ಇರುವ ಸ್ಥಳದಲ್ಲಿ ಮನೆಯ ಯಜಮಾನಿಯ ಹೆಸರು ಇಲ್ಲದೇ ಇದ್ರೆ ಅಂತಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗುವುದಿಲ್ಲ.
ನಿಮ್ಮಲ್ಲಿನ ತಾಂತ್ರಿಕ ದೋಷದಿಂದಲೇ ಗೃಹಲಕ್ಷ್ಮೀ ಯೋಜನೆಯ ಹಣ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿಲ್ಲವೇ ಎಂದು ಖಚಿತ ಪಡಿಸಿಕೊಳ್ಳಿ. ಒಂದೊಮ್ಮೆ ರೇಷನ್ ಕಾರ್ಡ್ , ಬ್ಯಾಂಕ್ ಖಾತೆಯ ಲಿಂಕ್ ಹಾಗೂ ಆಧಾರ್ ಲಿಂಕಿಂಗ್ ಮಾಡದೇ ಇದ್ದರೂ ಕೂಡ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ ಎಂದು ಮಾಹಿತಿ ನೀಡಿದರು.