ಒಂದೇ ವಾರದಲ್ಲಿ ರಾಜ್ಯದ 40,477 ಮಂದಿಗೆ ‘ಮದ್ರಾಸ್ ಐ’ ಸೋಂಕು – ಕರಾವಳಿಯಲ್ಲೂ ಉಲ್ಭಣಗೊಂಡ ‘ಮದ್ರಾಸ್ ಐ’, ಮುಂಜಾಗ್ರತೆ ಹೇಗೆ?

ಒಂದೇ ವಾರದಲ್ಲಿ ರಾಜ್ಯದ 40,477 ಮಂದಿಗೆ ‘ಮದ್ರಾಸ್ ಐ’ ಸೋಂಕು – ಕರಾವಳಿಯಲ್ಲೂ ಉಲ್ಭಣಗೊಂಡ ‘ಮದ್ರಾಸ್ ಐ’, ಮುಂಜಾಗ್ರತೆ ಹೇಗೆ?

ನ್ಯೂಸ್‌ ಆ್ಯರೋ : ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಪ್ರಕರಣಗಳು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಏರಿಕೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಜಾಗೃತಗೊಂಡು ಎಚ್ಚರಿಕೆಯಿಂದ ಇರಲು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ವಿವರಿಸಿದ ಅವರು, ಮದ್ರಾಸ್ ಐ ಎಂಬುದು ವೈರಸ್ ಮೂಲಕ ಹರಡುತ್ತದೆ. ಸೋಂಕು ತಗುಲಿದವರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗಿ ಕಣ್ಣಿನಲ್ಲಿ ಕಿರಿಕಿರಿ ಅನುಭವವಾಗುತ್ತದೆ. ಜತೆಗೆ ನೀರು ಸೋರುತ್ತಿರುತ್ತದೆ. ಕಣ್ಣಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ವ್ಯಕ್ತಿಯ ಕುತ್ತಿಗೆಯಲ್ಲಿ ಹಾಗೂ ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ಮೇಲಿನ ಲಕ್ಷಣಗಳು ಕಂಡುಬಂದರೆ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕೆಂದು ಸಲಹೆ ನೀಡಿದರು.

ರಾಜ್ಯದಾದ್ಯಂತ ಜುಲೈ 25 ರಿಂದ ಆಗಸ್ಟ್ 4ರ ವರೆಗೆ 40,477 ಪ್ರಕರಣಗಳು ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 504 ಮದ್ರಾಸ್ ಐ ಪ್ರಕರಣಗಳು ಇದುವರೆಗೆ ವರದಿಯಾಗಿದೆ. ಕಲಬುರ್ಗಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಈ ರೋಗವನ್ನು ಪತ್ತೆ ಹಚ್ಚಿ ಜಾಗೃತರಾಗಿರಬೇಕು ಎಂದರು.

ಮುನ್ನೆಚ್ಚರಿಕೆ ವಹಿಸುವುದು ಅಗತ್ಯ:

ಸೋಂಕಿನಿಂದ ಬಳಲುತ್ತಿರುವವರು ಶುದ್ಧ ಕರವಸ್ತ್ರವನ್ನು ಬಳಸಿ ಕಣ್ಣೀರನ್ನು ಸ್ವಚ್ಛಗೊಳಿಸುತ್ತಿರಬೇಕು. ಆ ಕರವಸ್ತ್ರವನ್ನು ಬೇರೆಯವರು ಮುಟ್ಟದಂತೆ ನೋಡಿಕೊಳ್ಳಬೇಕು. ಇನ್ನೂ ಕಣ್ಣಿನಲ್ಲಿ ಕಿರಿಕಿರಿ ಉಂಟಾದಾಗ ಉಜ್ಜುವುದನ್ನು ಮಾಡಿದರೆ ಮತ್ತಷ್ಟು ಕಣ್ಣು ಊದಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮದ್ರಾಸ್ ಐ ಸೋಂಕಿನಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಿಂದ ದೂರ ಉಳಿದು, ಮನೆಯಲ್ಲಿಯೇ ಎರಡು ದಿನ ಇರಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಎರಡು ದಿನ ಶಾಲೆಗೆ ಕಳುಹಿಸದಿರುವುದು ಉತ್ತಮ.

ಈ ಸೋಂಕಿಗೆ ಚಿಕಿತ್ಸೆಯು ಎಲ್ಲ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಈ ಸಂಬಂಧ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವಂತೆ ಡಿಡಿಪಿಐಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *