ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ ಶಿಕ್ಷೆ – ಶಹರ ಠಾಣೆ ಇನ್ಸ್‌ಪೆಕ್ಟರ್ ಮಹಮ್ಮದ್ ರಫೀಕ್ ಬದಲಿಗೆ ಬಿ.ಎ.ಜಾಧವ್ ನೇಮಕ

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ ಶಿಕ್ಷೆ – ಶಹರ ಠಾಣೆ ಇನ್ಸ್‌ಪೆಕ್ಟರ್ ಮಹಮ್ಮದ್ ರಫೀಕ್ ಬದಲಿಗೆ ಬಿ.ಎ.ಜಾಧವ್ ನೇಮಕ

ನ್ಯೂಸ್ ಆ್ಯರೋ : ಅಯೋಧ್ಯೆ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅಲ್ಪ ಮಟ್ಟಿನ ಮುಜುಗರದಿಂದ ಪಾರಾಗುವ ಯತ್ನ ನಡೆಸಿದೆ.

ಹುಬ್ಬಳ್ಳಿ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಮಹಮದ್ ರಫೀಕ್. ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದು, ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ ಆಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರಿ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ.

ಕಳೆದ ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನವಾಗ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ.

ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ ರಾಜಕೀಯವಿಲ್ಲ ಎಂದು ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಆದರೆ ಠಾಣೆಯ ಇನ್ಸ್‌ಪೆಕ್ಟರ್‌ ರಫೀಕ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸುವ ಅಗತ್ಯ ಏನಿತ್ತು? ಹಾಗೆ ಕಳುಹಿಸಿರುವುದರ ಹಿಂದೆ ಸರ್ಕಾರದ ಹುನ್ನಾರ ಇದೆ ಎಂದು ಹಲವು ಅನುಮಾನಗಳು ಮೂಡತೊಡಗಿವೆ.

ಒಂದು ವೇಳೆ ಸರ್ಕಾರ ಕಾನೂನು ಪ್ರಕಾರವೇ ನಡೆದುಕೊಂಡಿದ್ದರೆ ಪ್ರಭಾರಿಯನ್ನು ನೇಮಿಸುವ ಅಗತ್ಯವೇ ಇರಲಿಲ್ಲ. ಕಡ್ಡಾಯ ರಜೆಯ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಬಂಧಿಸಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡಂತೆ ಕಾಣುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಈ ಪ್ರಕರಣ ಇನ್ಯಾವ ತಿರುವು ಪಡೆಯಲಿದೆಯೋ ಕಾದು ನೋಡಬೇಕಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *