ಸರ್ಕಾರದ ಗೌಪ್ಯ ಸಭೆಯಲ್ಲಿ ಸುರ್ಜೇವಾಲ ಭಾಗಿ, ವ್ಯಾಪಕ ಟೀಕೆ – ATM ಸರ್ಕಾರದ ರಹಸ್ಯವೇನು ಕೇಳಿದ ಬಿಜೆಪಿ, ಹಂಗಿನ ಸರ್ಕಾರ ಎಂದ HDK..!!
- ಕರ್ನಾಟಕ
- June 13, 2023
- No Comment
- 96
ನ್ಯೂಸ್ ಆ್ಯರೋ : ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಸರ್ಕಾರೀ ಸಭೆಯೊಂದರಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭಾಗವಸಿರುವುದು ಟೀಕೆಗೆ ಕಾರಣವಾಗಿದೆ.
ಲೋಕಸಭಾ ಚುನಾವಣೆಗೆ ಮುನ್ನವೇ ಬಿಬಿಎಂಪಿ ಚುನಾವಣೆಯನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೀವಾಲಾ ನೇತೃತ್ವದಲ್ಲಿ ಚುನಾವಣಾ ಪೂರ್ವ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಿತು. ಇನ್ನು ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸಹ ಪಾಲ್ಗೊಂಡಿರುವುದಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಕರ್ನಾಟಕ, ಶಾಂಗ್ರಿಲಾ ಹೋಟೆಲ್ನಲ್ಲಿ ಎಟಿಎಂ ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು ಅಂತ ಪ್ರಶ್ನಿಸಿದೆ. ಶಾಂಗ್ರಿಲಾ ಹೋಟೆಲ್ನಲ್ಲಿ ಎಟಿಎಂ ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ? ಅಂತ ಪ್ರಶ್ನಿಸಿದೆ.
ಬಿಜೆಪಿ ನಂತರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಜರಿದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, ‘ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ’ ಎಂದು ಟೀಕಿಸಿದ್ದಾರೆ.