ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಹೇಳಿದ್ದೇನು? – ಸಾರ್ವಜನಿಕರಲ್ಲಿ ಭಯ ಮೂಡಲು ಕಾರಣವೇನು?
- ಕರ್ನಾಟಕ
- June 8, 2023
- No Comment
- 230
ನ್ಯೂಸ್ ಆ್ಯರೋ : ಭವಿಷ್ಯ ಹೇಳುವುದರಲ್ಲಿ ಕೋಡಿಮಠದ ಡಾ.ಶಿವಾನಂದ ಮಹಾ ಸ್ವಾಮೀಜಿ ಸಿದ್ಧಹಸ್ತರು. ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು. ಅದರಂತೆ ನಡೆದಿದ್ದು ಈಗ ಭಯಾನಕ ಭವಿಷ್ಯ ನುಡಿದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಈ ವರ್ಷ ಅಚಾನಕ್ಕಾಗಿ ಗುಡುಗು, ಮಿಂಚು ಬರಲಿದೆ. ಎರಡು, ಮೂರು ರಾಷ್ಟ್ರಗಳು ಮುಳುಗಡೆಯಾಗಲಿವೆ. ಎಲ್ಲೋ ನಡೆದ ಬಾಂಬ್ ದಾಳಿಯಿಂದ ನಾವು ಸಂಕಷ್ಟ ಅನುಭವಿಸಲಿದ್ದೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸಂದರ್ಭ ಅವರು ಈ ಭಯಾನಕ ಭವಿಷ್ಯ ನುಡಿದಿದ್ದಾರೆ.
ಈ ವರ್ಷ ದೇಶದಲ್ಲಿ ದೊಡ್ಡ ದುರಂತ ಸಂಭವಿಸುತ್ತದೆ ಎಂದು ಸ್ವಾಮೀಜಿ ಹೇಳಿದ್ದರು. ಅದರಂತೆ ಒಡಿಶಾ ರೈಲು ಅಪಘಾತ ಸಂಭವಿಸಿರುವುದು ಉಲ್ಲೇಖಾರ್ಹ. ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಆಧ್ಯಾತ್ಮ ಬಿಟ್ಟು ಹೋದರೆ ದೈವವೇ ಉತ್ತರ ನೀಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.