ಮದುವೆ ಊಟ ಸೇವಿಸಿ‌ ನೂರಕ್ಕೂ ಅಧಿಕ ಮಂದಿ ಅಸ್ವಸ್ಥ – ಗ್ರಾಮದಲ್ಲೇ ಆರೋಗ್ಯ ಇಲಾಖೆ ಮೊಕ್ಕಾಂ..!!

ಮದುವೆ ಊಟ ಸೇವಿಸಿ‌ ನೂರಕ್ಕೂ ಅಧಿಕ ಮಂದಿ ಅಸ್ವಸ್ಥ – ಗ್ರಾಮದಲ್ಲೇ ಆರೋಗ್ಯ ಇಲಾಖೆ ಮೊಕ್ಕಾಂ..!!

ನ್ಯೂಸ್‌ ಆ್ಯರೋ : ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಚಿಕ್ಕೋಡಿಯ ಹಿರೇಕೋಡಿ ಹೊರವಲಯದಲ್ಲಿ ನಡೆದಿದೆ.

ಸೋಮವಾರ ಹಿರೇಕೋಡಿ ಹೊರವಲಯದಲ್ಲಿ ಪಟೇಲ್ ಕುಟುಂಬದ ಮದುವೆ ನಡೆಯಿತು. ಅಲ್ಲಿ ಮಾಂಸಾಹಾರ ಹಾಗೂ ಸಸ್ಯಾಹಾರ ಊಟವನ್ನು ತಯಾರು ಮಾಡಲಾಗಿತ್ತು. ಮಾಂಸಾಹಾರ ಸೇವಿಸಿದ 100ಕ್ಕೂ ಅಧಿಕ ಮಂದಿ ವಾಂತಿ-ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಮದುವೆ ಸಮಾರಂಭಕ್ಕೆ ಮಹಾರಾಷ್ಟ್ರದ ಮಿರಜ್‌ನಿಂದಲೂ ಸಂಬಂಧಿಕರು ಆಗಮಿಸಿದ್ದರು. ಮಿರಜ್‌ನಿಂದ ಆಗಮಿಸಿದವರಿಗೂ ವಾಂತಿ ಭೇದಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ.

ಇನ್ನು ಈ ಘಟನೆ ಸಂಬಂಧ ಹಿರೇಕೋಡಿಯಲ್ಲಿ ಡಿಎಚ್‌ಒ ಡಾ.ಸುಕುಮಾರ್ ಭಾಗಾಯಿ ಮಾತನಾಡಿ, ಮದುವೆ ಊಟ ಮಾಡಿ ಮನೆಗೆ ಬಂದವರಿಗೆ ತಡರಾತ್ರಿ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಅನೇಕರು ರಾತ್ರಿಯೇ ತಮ್ಮ ಗ್ರಾಮದ ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

ಐವರು ವೈದ್ಯರು, 15 ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಮದುವೆಯಲ್ಲಿ ಊಟ ಮಾಡಿದ ಬಳಿಕ ಸಂಜೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಮದುವೆ ಸಮಾರಂಭದಲ್ಲಿ ನೀಡಿದ ಆಹಾರದ ಸ್ಯಾಂಪಲ್ ಪಡೆದು ಪರೀಕ್ಷೆ ಮಾಡುತ್ತೇವೆ. ಯಾವುದೇ ರೋಗಿಗಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Related post

ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಬೆಡ್​ ಮೇಲಿನ ವಿಡಿಯೋ

ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ…

ನ್ಯೂಸ್ ಆ್ಯರೋ :ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಸಹೋದರಿ, ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಡೊಮೆಟ್ರಿಯೊಸಿಸ್ ಸಮಸ್ಯೆ ಇರುವುದು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಂದು…
ಐಷಾರಾಮಿ ಬಂಗಲೆಯಲ್ಲೇ ವಾಸ, ದುಬಾರಿ ಕಾರಿನಲ್ಲೇ ಓಡಾಟ! ಬಿಜೆಪಿ ಅಭ್ಯರ್ಥಿ, ಬಾಲಿವುಡ್ ನಟಿ ಕಂಗನಾ ಆಸ್ತಿ ಎಷ್ಟು ಕೋಟಿ ಗೊತ್ತಾ?

ಐಷಾರಾಮಿ ಬಂಗಲೆಯಲ್ಲೇ ವಾಸ, ದುಬಾರಿ ಕಾರಿನಲ್ಲೇ ಓಡಾಟ! ಬಿಜೆಪಿ ಅಭ್ಯರ್ಥಿ, ಬಾಲಿವುಡ್…

ನ್ಯೂಸ್ ಆ್ಯರೋ : ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಕಣ ರಂಗೇರಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗಿದೆ. ಈ‌ ಬಾರಿ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್‌…
ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…

Leave a Reply

Your email address will not be published. Required fields are marked *