ಪೊಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರಾಳ, ಹಾಗೆ ಹೋಗಿ ಹೀಗೆ ಬಂದ ಸ್ವಾಮೀಜಿ..! – ಎರಡನೇ ಕೇಸ್ ನಲ್ಲೂ ಜಾಮೀನು ನೀಡಿದ ಹೈಕೋರ್ಟ್

ಪೊಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರಾಳ, ಹಾಗೆ ಹೋಗಿ ಹೀಗೆ ಬಂದ ಸ್ವಾಮೀಜಿ..! – ಎರಡನೇ ಕೇಸ್ ನಲ್ಲೂ ಜಾಮೀನು ನೀಡಿದ ಹೈಕೋರ್ಟ್

ನ್ಯೂಸ್ ಆ್ಯರೋ : ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣ ಸ್ವಾಮೀಜಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಚಿತ್ರದುರ್ಗ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರೆಂಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್‌ 2ನೇ ಪೊಕ್ಸೊ ಪ್ರಕರಣದಲ್ಲಿಯೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಮುರುಘಾ ಮಠದ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿಯ ಮೇಲೆ ಎರಡು ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಎ1 ಆರೋಪಿ ಮುರುಘಾ ಸ್ವಾಮೀಜಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಹೈಕೋರ್ಟ್‌ನಿಂದ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮುರುಘಾ ಸ್ವಾಮೀಜಿಗೆ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, 2ನೇ ಪ್ರಕರಣದಲ್ಲಿ ಕೇವಲ ಬಾಡಿ ವಾರೆಂಟ್‌ ಇದ್ದುದರಿಂದ ಜೈಲಿನಲ್ಲಿಟ್ಟುಕೊಳ್ಳಲಾಗದೇ 14 ತಿಂಗಳಿಂದ ಜೈಲು ಶಿಕ್ಷೆಯಲ್ಲಿದ್ದ ಸ್ವಾಮೀಜಿಗೆ ಬಿಡುಗಡೆ ಭಾಗ್ಯ ದೊರೆತಿತ್ತು.

ಮುರುಘಾ ಸ್ವಾಮೀಜಿ 2ನೇ ಪೋಕ್ಸೋ ಕೇಸ್‌ನ ಸಾಕ್ಷ್ಯ ಮಾಡುತ್ತಾರೆಂದು ಆರೋಪಿಸಿ ಅವರನ್ನು ಜೈಲಿಗೆ ಕಳಿಸುವಂತೆ ಪುನಃ ಚಿತ್ರದುರ್ಗ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರಿಂದ ಜಾಮೀನು ರಹಿತ ವಾರೆಂಟ್‌ ಹೊರಡಿಸಿ ಬಂಧಿಸುವಂತೆ ಚಿತ್ರದುರ್ಗ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಇದಾದ ಕೆಲವೇ ಗಂಟೆಗಳಲ್ಲಿ ದಾವರಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದ ಮುರುಘಾ ಸ್ವಾಮೀಜಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿ ವೈದ್ಯಕೀಯ ತಪಾಸಣೆ ಮಾಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯದಿಂದ ಡಿಸೆಂಬರ್‌ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿತ್ತು.

ಚಿತ್ರದುರ್ಗ ನ್ಯಾಯಾಲಯ ಆದೇಶದ ವಿರುದ್ಧ ಹೈಕೋರ್ಟ್‌ ಮೊರೆ ಹೋದ ಮುರುಘಾ ಸ್ವಾಮೀಜಿ ಪರ ವಕೀಲರು, ಹೈಕೋರ್ಟ್‌ ಆದೇಶವನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಚಿತ್ರದುರ್ಗ ನ್ಯಾಯಾಲಯದಲ್ಲಿ ಮುರುಘಾ ಸ್ವಾಮೀಜಿಗೆ 2ನೇ ಪ್ರಕರಣದಲ್ಲಿ ಜೈಲು ಬಂಧನ ವಾರೆಂಟ್‌ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕಿಡಿಕಾರಿದ ಹೈಕೋರ್ಟ್‌ ಚಿತ್ರದುರ್ಗ ನ್ಯಾಯಾಲಯದ ಜಾಮೀನು ರಹಿತ ಬಂಧನದ ವಾರೆಂಟ್‌ ರದ್ದುಗೊಳಿಸಿದೆ. ಜೊತೆಗೆ, ಮುರುಘಾ ಸ್ವಾಮೀಜಿ ಮೇಲಿದ್ದ ಎರಡನೇ ಪೋಕ್ಸೋ ಪ್ರಕರಣದಲ್ಲಿಯೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *