ಪೊಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರಾಳ, ಹಾಗೆ ಹೋಗಿ ಹೀಗೆ ಬಂದ ಸ್ವಾಮೀಜಿ..! – ಎರಡನೇ ಕೇಸ್ ನಲ್ಲೂ ಜಾಮೀನು ನೀಡಿದ ಹೈಕೋರ್ಟ್

ಪೊಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರಾಳ, ಹಾಗೆ ಹೋಗಿ ಹೀಗೆ ಬಂದ ಸ್ವಾಮೀಜಿ..! – ಎರಡನೇ ಕೇಸ್ ನಲ್ಲೂ ಜಾಮೀನು ನೀಡಿದ ಹೈಕೋರ್ಟ್

ನ್ಯೂಸ್ ಆ್ಯರೋ : ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣ ಸ್ವಾಮೀಜಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಚಿತ್ರದುರ್ಗ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರೆಂಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್‌ 2ನೇ ಪೊಕ್ಸೊ ಪ್ರಕರಣದಲ್ಲಿಯೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಮುರುಘಾ ಮಠದ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿಯ ಮೇಲೆ ಎರಡು ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಎ1 ಆರೋಪಿ ಮುರುಘಾ ಸ್ವಾಮೀಜಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಹೈಕೋರ್ಟ್‌ನಿಂದ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮುರುಘಾ ಸ್ವಾಮೀಜಿಗೆ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, 2ನೇ ಪ್ರಕರಣದಲ್ಲಿ ಕೇವಲ ಬಾಡಿ ವಾರೆಂಟ್‌ ಇದ್ದುದರಿಂದ ಜೈಲಿನಲ್ಲಿಟ್ಟುಕೊಳ್ಳಲಾಗದೇ 14 ತಿಂಗಳಿಂದ ಜೈಲು ಶಿಕ್ಷೆಯಲ್ಲಿದ್ದ ಸ್ವಾಮೀಜಿಗೆ ಬಿಡುಗಡೆ ಭಾಗ್ಯ ದೊರೆತಿತ್ತು.

ಮುರುಘಾ ಸ್ವಾಮೀಜಿ 2ನೇ ಪೋಕ್ಸೋ ಕೇಸ್‌ನ ಸಾಕ್ಷ್ಯ ಮಾಡುತ್ತಾರೆಂದು ಆರೋಪಿಸಿ ಅವರನ್ನು ಜೈಲಿಗೆ ಕಳಿಸುವಂತೆ ಪುನಃ ಚಿತ್ರದುರ್ಗ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರಿಂದ ಜಾಮೀನು ರಹಿತ ವಾರೆಂಟ್‌ ಹೊರಡಿಸಿ ಬಂಧಿಸುವಂತೆ ಚಿತ್ರದುರ್ಗ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಇದಾದ ಕೆಲವೇ ಗಂಟೆಗಳಲ್ಲಿ ದಾವರಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದ ಮುರುಘಾ ಸ್ವಾಮೀಜಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿ ವೈದ್ಯಕೀಯ ತಪಾಸಣೆ ಮಾಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯದಿಂದ ಡಿಸೆಂಬರ್‌ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿತ್ತು.

ಚಿತ್ರದುರ್ಗ ನ್ಯಾಯಾಲಯ ಆದೇಶದ ವಿರುದ್ಧ ಹೈಕೋರ್ಟ್‌ ಮೊರೆ ಹೋದ ಮುರುಘಾ ಸ್ವಾಮೀಜಿ ಪರ ವಕೀಲರು, ಹೈಕೋರ್ಟ್‌ ಆದೇಶವನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಚಿತ್ರದುರ್ಗ ನ್ಯಾಯಾಲಯದಲ್ಲಿ ಮುರುಘಾ ಸ್ವಾಮೀಜಿಗೆ 2ನೇ ಪ್ರಕರಣದಲ್ಲಿ ಜೈಲು ಬಂಧನ ವಾರೆಂಟ್‌ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕಿಡಿಕಾರಿದ ಹೈಕೋರ್ಟ್‌ ಚಿತ್ರದುರ್ಗ ನ್ಯಾಯಾಲಯದ ಜಾಮೀನು ರಹಿತ ಬಂಧನದ ವಾರೆಂಟ್‌ ರದ್ದುಗೊಳಿಸಿದೆ. ಜೊತೆಗೆ, ಮುರುಘಾ ಸ್ವಾಮೀಜಿ ಮೇಲಿದ್ದ ಎರಡನೇ ಪೋಕ್ಸೋ ಪ್ರಕರಣದಲ್ಲಿಯೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *