ದಕ್ಷಿಣ ಕನ್ನಡ ಜಿಲ್ಲೆಯ 14 ಕಡೆಗಳಲ್ಲಿ NIA ದಾಳಿ – ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಎಸಗಲು ಜಿಲ್ಲೆಯಿಂದ ಹಣಕಾಸು ನೆರವು.!!

ದಕ್ಷಿಣ ಕನ್ನಡ ಜಿಲ್ಲೆಯ 14 ಕಡೆಗಳಲ್ಲಿ NIA ದಾಳಿ – ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಎಸಗಲು ಜಿಲ್ಲೆಯಿಂದ ಹಣಕಾಸು ನೆರವು.!!

ನ್ಯೂಸ್ ಆ್ಯರೋ : ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ 2022ರ ಜುಲೈ ತಿಂಗಳಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಅಂಶ ಬಹಿರಂಗವಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್​ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು.

ಇನ್ನು ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ನೀಡಲಾಗಿದೆ ಎಂಬ ಸತ್ಯ ತನಿಖೆ ವೇಳೆ ಬಹಿರಂಗವಾಗಿತ್ತು. ಈ ಹಣದ ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದ್ದು, ಇದನ್ನು ಭಾರತದಲ್ಲಿ ಭಯೋತ್ಪಾದಕ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆ ಹಚ್ಚಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *