
ಪ್ರಧಾನಿ ಮೋದಿಯಿಂದ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ : ರಾಜ್ಯದ ಮೊದಲ ಆಕ್ಸಸ್ ಕಂಟ್ರೋಲ್ಡ್ ಹೈವೆ
- ಕರ್ನಾಟಕ
- March 12, 2023
- No Comment
- 65
ನ್ಯೂಸ್ ಆ್ಯರೋ : 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಬಹುನೀರೀಕ್ಷಿತ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನುಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯದಲ್ಲಿ ಲೋಕರ್ಪಣೆ ಮಾಡಿದರು.
ಬೆಂಗಳೂರು ಟು ಮೈಸೂರು ಸುಗಮ ಸಂಚಾರಕ್ಕಾಗಿ ನಿರ್ಮಾಣ ಆಗಿರುವ 118 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಲೋಕಾರ್ಪಣೆ ಆಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.
ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿತಿನ್ ಗಡ್ಕರಿ, ಸಂಸದರಾದ ಸುಮಲತಾ, ಪ್ರತಾಪ್ ಸಿಂಹ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಸೇರಿ ಹಲವರು ಭಾಗಿಯಾದರು. 1.8 ಕಿಲೋಮೀಟರ್ ರೋಡ್ ಶೋ ನಡೆಸಿದ ಬಳಿಕ ಹೆದ್ದಾರಿ ಉದ್ಘಾಟಿಸಿದರು.
ರಾಜ್ಯದ ಮೊದಲ ಆಕ್ಸಸ್ ಕಂಟ್ರೋಲ್ಡ್ ಹೈವೆ ಇದಾಗಿದ್ದು, ಇದರ ವಿಶೇಷತೆಗಳು ಇಲ್ಲಿವೆ.
- ಹೆದ್ದಾರಿಯಲ್ಲಿಯೇ ಹೆಲಿಕಾಪ್ಟರ್ ಇಳಿಯುವ ವ್ಯವಸ್ಥೆ
- ದ್ವಿಚಕ್ರ– ತ್ರಿಚಕ್ರ ವಾಹನಗಳಿಗೆ ಎಕ್ಸ್ಪ್ರೆಸ್ವೇನಲ್ಲಿ ನಿರ್ಬಂಧ
- ಎಕ್ಸ್ಪ್ರೆಸ್ವೇನ ಎರಡೂ ಬದಿ 7 ಅಡಿ ಎತ್ತರದ ತಂತಿಬೇಲಿ
- ಪ್ರಯಾಣದ ಅವಧಿ 3 ಗಂಟೆಯಿಂದ 90 ನಿಮಿಷಕ್ಕೆ ಇಳಿಕೆ