ಪೊಕ್ಸೊ ಪ್ರಕರಣದ ಆರೋಪಿ ಮುರುಘಾಶ್ರೀ ಜೈಲಿನಿಂದ ಬಿಡುಗಡೆ – ಹೊರಬಂದ ಬಳಿಕ ಮಾಧ್ಯಮದ ಮುಂದೆ ಹೇಳಿದ್ದೇನು?

ಪೊಕ್ಸೊ ಪ್ರಕರಣದ ಆರೋಪಿ ಮುರುಘಾಶ್ರೀ ಜೈಲಿನಿಂದ ಬಿಡುಗಡೆ – ಹೊರಬಂದ ಬಳಿಕ ಮಾಧ್ಯಮದ ಮುಂದೆ ಹೇಳಿದ್ದೇನು?

ನ್ಯೂಸ್ ಆ್ಯರೋ : ಮುರುಘಾ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇರೆಗೆ ಪೊಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಮಾಜಿ ಸ್ವಾಮೀಜಿ ಇಂದು ಬಿಡುಗಡೆಯಾಗಿದ್ದಾರೆ.

ಕಳೆದ 14 ತಿಂಗಳಿನಿಂದ ಕಾರಾಗೃಹದಲ್ಲಿದ್ದ ಮುರುಘಾ ಶರಣರು ಇಂದು ಬಿಡುಗಡೆಯಾಗುತ್ತಿದ್ದಂತೆ ದಾವಣಗೆರೆ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.

ಚಿತ್ರದುರ್ಗಕ್ಕೆ ಕಾಲಿಡದಂತೆ ಜಾಮೀನಿನಲ್ಲಿ ಷರತ್ತು ಹಾಕಿದ್ದ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಚಿತ್ರದುರ್ಗದತ್ತ ಸ್ವಾಮೀಜಿ ಪ್ರಯಾಣ ಬೆಳೆಸಿದರು.

ನಿನ್ನೆಯೇ ಬಿಡುಗಡೆಯಾಗಬೇಕಿದ್ದರೂ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಾಲಯದ ಆದೇಶದಂತೆ ಜಿಲ್ಲಾ ಕಾರಾಗೃಹದ ಅಧಿಕಾರಿ ಸ್ವಾಮೀಜಿಯನ್ನು ಬಿಡುಗಡೆಗೊಳಿಸಿದ್ದಾರೆ.

ಬಸವಲಿಂಗ ಪ್ರಭು ಶ್ರೀ ಹಾಗೂ ಇತರರು ಶರಣರನ್ನು ಖಾಸಗಿ ವಾಹನದಲ್ಲಿ ಕರೆದುಕೊಂಡು ದಾವಣಗೆರೆ ಕಡೆಗೆ ಹೊರಟಿದ್ದು, ಜೈಲಿಂದ ದಾವಣಗೆರೆಯ ವಿರಕ್ತ ಮಠಕ್ಕೆ ಮುರುಘಾ ಶರಣರು ಆಗಮಿಸಿದರು.

ದಾವಣಗೆರೆಯ ಜಯದೇವ ವೃತ್ತದಲ್ಲಿರುವ ಹಿರಿಯ ಸ್ವಾಮೀಜಿಗಳ ಗದ್ದುಗೆಗೆ ಮುರುಘಾ ಶರಣರು ನಮಸ್ಕರಿಸಿದ್ದು,ಈ ವೇಳೆ ದಾವಣಗೆರೆ ಭಕ್ತರು, ವಿರಕ್ತ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳಿಂದ ಪಾದಪೂಜೆ ನೇರವೇರಿಸಿ ಅದ್ದೂರಿ ಸ್ವಾಗತ ಕೋರಲಾಯಿತು.

ಮುರುಘಾಶರಣರಿಂದ ಪ್ರಥಮ ಪ್ರತಿಕ್ರಿಯೆ ಹೀಗಿತ್ತು..

ನಾವು ಮೌನಕ್ಕೆ ಶರಣಾಗುತ್ತೆವೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮ್ಮ ಸಹಕಾರವಿರಲಿ, ನಮ್ಮ ವಕೀಲರು ನಿಮಗೆಲ್ಲ ತಿಳಿಸಿದ್ದಾರೆ ಎಂದ ಶರಣರು ಹೇಳಿದ್ದಾರೆ ‌

ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ ಹಿನ್ನೆಲೆಯಲ್ಲಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಇರುವ ಶಿವಯೋಗಿ ಮಂದಿರದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ ಮಾಡಲಾಗಿದೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *