ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಕಳ್ಳತನ ಪ್ರಕರಣ – ಕಚೇರಿ ಸಿಬ್ಬಂದಿಗಳೇ ಕಳ್ಳರು, 80 ಲಕ್ಷ ನಗದು ಜಪ್ತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಕಳ್ಳತನ ಪ್ರಕರಣ – ಕಚೇರಿ ಸಿಬ್ಬಂದಿಗಳೇ ಕಳ್ಳರು, 80 ಲಕ್ಷ ನಗದು ಜಪ್ತಿ

ನ್ಯೂಸ್ ಆ್ಯರೋ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ನ ರಾಯಪುರ ಕಚೇರಿಯಲ್ಲಿ ಅಕ್ಟೋಬರ್​ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಮೂವರು ಆರೋಪಿಗಳು ಟ್ರಸ್ಟ್‌ನ ಕೆಲಸವರಾಗಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಹುಬ್ಬಳ್ಳಿ -ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್​ ಅವರು ಮಾಧ್ಯಮದವರೊಂದಿಗೆ ಮಾತನಾಡಿ, “ಈ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಘಟನಾ ಸ್ಥಳ ಪರಿಶೀಲನೆ ಮಾಡಿದಾಗ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಯಾವುದೇ ಕುರುಹುಗಳನ್ನು ಆರೋಪಿಗಳು ಪೊಲೀಸರಿಗೆ ಬಿಟ್ಟುಕೊಟ್ಟಿರಲಿಲ್ಲ.

ಪ್ರಕರಣ ಸಂಬಂಧ ವಿದ್ಯಾನಗರ ಸಬ್​ ಇನ್ಸ್​ಪೆಕ್ಟರ್​ ಸಂಗಮೇಶ್​ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು. ತಂಡವು ಯಾವುದೇ ಕುರುಹುಗಳಿಲ್ಲದ ಈ ಪ್ರಕರಣವನ್ನು ವೈಜ್ಞಾನಿಕವಾಗಿ ತನಿಖೆ ನಡೆಸಿ, ಎಲ್ಲ ಪೊಲೀಸರ ಸಹಯೋಗದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳನ್ನು ಬಂಧಿಸಿ ₹79,89,870 ಲಕ್ಷ ನಗದು ಮತ್ತು ಅಪರಾಧಕ್ಕಾಗಿ ಬಳಸಿದ್ದ ಕಾರು, ಮೊಬೈಲ್​ ಸೇರಿ ₹85,89,770 ಲಕ್ಷ ಸೊತ್ತನ್ನು ವಶಪಡಿಕೊಂಡಿದ್ದೇವೆ. ಬಂಧಿತ ಆರೋಪಿಗಳಲ್ಲಿ ಮೂವರು ಆ ಟ್ರಸ್ಟ್​ನಲ್ಲಿಯೇ ಕೆಲಸ ಮಾಡುತ್ತಿದ್ದರು” ಎಂದು ತಿಳಿಸಿದರು.

“ಕುಶಾಲ್​ ಕುಮಾರ್​, ಬಸವರಾಜ್​, ಮಹಾಂತೇಶ್ ಟ್ರಸ್ಟ್​ನ​ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಾಥಮಿಕವಾಗಿ ಇವರು ಕಳ್ಳತನಕ್ಕೆ ಯೋಜನೆಯನ್ನು ಮಾಡಿಕೊಂಡು ಇತರೆ 7 ಮಂದಿ ಆರೋಪಿಗಳನ್ನು ಜೊತೆ ಸೇರಿ ಈ ಕೃತ್ಯ ಎಸಗಿದ್ದಾರೆ. ಜಿಲಾನಿ, ಪರಶುರಾಮ, ರಂಗಪ್ಪ, ಮಂಜುನಾಥ, ಕಿರಣ, ರಜಾಕ್ ಮತ್ತು ವೀರೇಶ ಇನ್ನುಳಿದ ಆರೋಪಿಗಳಾಗಿದ್ದಾರೆ” ಎಂದು ಮಾಹಿತಿ ನೀಡಿದರು.

Related post

ಕಿರುತೆರೆ ನಟಿ ಅಗ್ನಿಸಾಕ್ಷಿ ‘ವೈಷ್ಣವಿ ಗೌಡ’ ಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಕಿರುತೆರೆ ನಟಿ ಅಗ್ನಿಸಾಕ್ಷಿ ‘ವೈಷ್ಣವಿ ಗೌಡ’ ಗೆ ದಂಡ ವಿಧಿಸಿದ ಟ್ರಾಫಿಕ್…

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ರಾ ಗುಳಿ ಕೆನ್ನೆ ಬೆಡಗಿ..! ನ್ಯೂಸ್ ಆರೋ: ಸಂಚಾರ ನಿಯಮವನ್ನು ಪಾಲಿಸದೇ ಇದ್ದುದ್ದಕ್ಕೆ  ಬೆಂಗಳೂರು ಸಂಚಾರಿ  ಪೊಲೀಸರು ಕನ್ನಡದ ಕಿರುತೆರೆ ನಟಿಯೊಬ್ಬರಿಗೆ ಶಾಕ್‌ ಕೊಟ್ಟಿದ್ದಾರೆ.…
ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಸಾಲ ತೆಗೆದುಕೊಳ್ಳಲು ಹೊರಟಿದ್ದರೆ ಮತ್ತು ಈ ಕೆಲಸದಲ್ಲಿ…

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…

Leave a Reply

Your email address will not be published. Required fields are marked *