ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಮೂವರ ಬಂಧನ – ಸುಳ್ಯ ಮೂಲದ ಒಬ್ಬ, ಸೋಮವಾರಪೇಟೆಯ ಇಬ್ಬರು ಎನ್ಐಎ ಬಲೆಗೆ..!!
- ಕರ್ನಾಟಕ
- May 10, 2024
- No Comment
- 1239
ನ್ಯೂಸ್ ಆ್ಯರೋ : ಬೆಳ್ಳಾರೆಯ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ತಂಡ ಮೂವರು ಆರೋಪಿಗಳನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಕಾಫಿ ಎಸ್ಟೇಟ್ ನಲ್ಲಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಳ್ಯ ಮೂಲದ ಮುಸ್ತಫಾ ಪೈಚಾರ್ ಅಲ್ಲದೇ ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಬಂಧಿತರು.
ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್ನ ಕಾಫಿ ಎಸ್ಟೇಟ್ ನ ಸಿರಾಜ್ ಎಂಬಾತನ ಬಳಿ ಕೆಲಸಕ್ಕೆ ಸೇರಿದ್ದು, ಕಾರ್ಮಿಕರಾಗಿ ದುಡಿಯುತ್ತಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ಅವರನ್ನೂ ಎನ್ಐಎ ತಂಡ ವಶಕ್ಕೆ ಪಡೆದಿದೆ ಎನ್ನಲಾಗಿದ್ದು, ಆರೋಪಿಗಳನ್ನು ಬೆಂಗಳೂರಿನತ್ತ ಎನ್ಐಎ ತಂಡ ಕರೆದುಕೊಂಡು ಹೋಗಿದೆ ಎನ್ನಲಾಗುತ್ತಿದೆ.