ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೆ ವಿಧಾನಸೌಧಕ್ಕೆ ಮುತ್ತಿಗೆ – ಸರಕಾರಕ್ಕೆ ಎಚ್ಚರಿಕೆ ನೀಡಿದ ರಾಷ್ಟ್ರೀಯ ಸಂತ ಸಂಘ
- ಕರ್ನಾಟಕ
- August 14, 2023
- No Comment
- 140
ನ್ಯೂಸ್ ಆ್ಯರೋ : ಕಳೆದ ಬಾರಿಯ ಬಿಜೆಪಿ ಸರಕಾರ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿತ್ತು. ಆದರೆ ಈ ಬಾರಿಯ ಕಾಂಗ್ರೆಸ್ ಸರಕಾರ ಇದನ್ನು ವಾಪಸ್ ತೆಗೆದುಕೊಳ್ಳುವ ಕುರಿತು ಚಿಂತನೆ ನಡೆಸಿದ್ದು, ಇದಕ್ಕೆ ರಾಷ್ಟ್ರೀಯ ಸಂತ ಸಂಘದ ನಿರ್ದೇಶಕ ಪರಮಾತ್ಮ ಜಿ. ಮಹರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುತ್ತಿಗೆ ಹಾಕುವ ಎಚ್ಚರಿಕೆ
ಈ ಬಗ್ಗೆ ಮಾತನಾಡಿದ ಮಹಾರಾಜ್, ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆ ವಾಪಾಸ್ ತೆಗೆದುಕೊಂಡರೆ ಸಂತರೇ ವಿಧಾನಸವಧ ಮುತ್ತಿಗೆ ಹಾಕಲಿದ್ದಾರೆ. ಸರಕಾರ ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಹಿಂಪಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ವತಿಯಿಂದ ಮೇಲುಕೋಟೆಯ 41 ಪೀಠಾಧೀಶರಾದ ಯದುಗಿರಿ ಯತಿರಾಜ ನಾರಾಯಣ ರಾಮನುಜ ಜೀಯರ್ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಸಂತ ಸಮಾವೇಶದಲ್ಲಿ ಅವರು ಮಾತನಾಡಿದರು.
ಹಿಂದೂ ಧರ್ಮ, ಸಂಸ್ಕೃತಿ, ಸಂಪ್ರದಾಯ, ಧರ್ಮ ಕಾಪಾಡುವ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆದಿದೆ. ಅವರವರ ಧರ್ಮವನ್ನು ಪಾಲಿಸಲಿ. ಆದರೆ ಮತಾಂತರ ಮಾಡಬಾರದು ಎಂದು ಶಾಸಕ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಲವ್ ಜಿಹಾದ್ ಗೆ ಸರಕಾರ ಅವಕಾಶ ನೀಡಬಾರದು. ಬಡತನದ ನೆಪವಾಗಿಸಿಕೊಂಡು ಮತಾಂತರ ಮಾಡುವುದನ್ನು ತಡೆಯಬೇಕು. ಕಾನೂನು ಪ್ರಕಾರ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಕಾನೂನು ತರಲಾಗಿದೆ. ಅದನ್ನು ಸರಕಾರ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.